9:07 PM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ನಿರಂತರ ಮಳೆಗೆ ಕುಸಿದ ಗುಡ್ಡ, ರಸ್ತೆ ಅಡಿಯಿಂದ ಜಾರಿದ ಮಣ್ಣು ; ಅದ್ಯಪಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳೇ ಬಂದ್ !!

06/07/2022, 12:39

ಚಿತ್ರ: ಗಣೇಶ್ ಅದ್ಯಪಾಡಿ ಮಂಗಳೂರು

ಬಜಪೆ (Reporterkarnataka.com)
ಮಂಗಳೂರು ತಾಲೂಕಿನ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅದ್ಯಪಾಡಿ ಪದವಿಗೆ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳು ಮಳೆಯ ಕಾರಣದಿಂದಾಗಿ ಮುಚ್ಚಿ ಹೋಗಿದ್ದು ಊರಿಗೆ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳಲ್ಲಿಯೂ ಸಂಚಾರವಿರದೆ ಹೊರಗಡೆಯಿಂದ ಸಂಪರ್ಕ ಕಳೆದುಕೊಳ್ಳುವ ಭೀತಿಯಿಂದ ಜನರು ಇದ್ದಾರೆ.


ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅದ್ಯಪಾಡಿ ಪದವಿನಿಂದ ಬಜಪೆಗೆ ಹೋಗುವಂತಹ ರಸ್ತೆಯಲ್ಲಿ ಗುಡ್ಡೆ ಬಿರಿದು ಪೂರ್ಣ ರಸ್ತೆಯ ಮೇಲೆ ಮಣ್ಣಿನ ರಾಶಿ ಆವರಿಸಿಕೊಂಡಿರುವುದರಿಂದ ಯಾವುದೇ ವಾಹನಗಳ ಸಂಚಾರ ಸಾಧ್ಯವಾಗುತ್ತಿಲ್ಲ.
ಅದೇ ರೀತಿ ಅದ್ಯಪಾಡಿ ಶಾಲೆಯಿಂದ ಕೆಂಜಾರು ಕಡೆ ಹೋಗುವ ರಸ್ತೆಯಲ್ಲಿ ಕಾಂಕ್ರೀಟ್ ಕೆಳಭಾಗದಿಂದ ಮಣ್ಣು ಕುಸಿದು ಹೋಗಿದ್ದು, ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ರಸ್ತೆಯ ಕೆಳಭಾಗದಿಂದ ಮಣ್ಣು ಸರಿದು ಹೋಗಲು ರಭಸವಾಗಿ ಹರಿದ ನೀರು ಕಾರಣವಾಗಿದ್ದು, ಹಲವು ಮಂದಿ ಏರ್ಪೋರ್ಟ್ ಮೇಲೆ ಕೂಡ ಆರೋಪವನ್ನು ಹೊರಿಸುತ್ತಿದ್ದಾರೆ.


ಸ್ಥಳಕ್ಕೆ ಶಾಸಕ ಡಾ.ವೈ.ಭರತ್ ಶೆಟ್ಟಿ ಭೇಟಿಯನ್ನು ನೀಡಿದ್ದಾರೆ. ಒಟ್ಟಿನಲ್ಲಿ ಅದ್ಯಪಾಡಿಯ ಜನತೆಗೀಗ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳನ್ನು ಉಪಯೋಗಿಸಲಾಗದೆ ಅಸಹಾಯಕ ಪರಿಸ್ಥಿತಿಯಲ್ಲಿದ್ದು, ಆಡಳಿತ ವ್ಯವಸ್ಥೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ತ್ವರಿತ ಕ್ರಮವನ್ನು ತೆಗೆದುಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು