3:00 PM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ನಿರಂತರ ಮಳೆಗೆ ಕುಸಿದ ಗುಡ್ಡ, ರಸ್ತೆ ಅಡಿಯಿಂದ ಜಾರಿದ ಮಣ್ಣು ; ಅದ್ಯಪಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳೇ ಬಂದ್ !!

06/07/2022, 12:39

ಚಿತ್ರ: ಗಣೇಶ್ ಅದ್ಯಪಾಡಿ ಮಂಗಳೂರು

ಬಜಪೆ (Reporterkarnataka.com)
ಮಂಗಳೂರು ತಾಲೂಕಿನ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅದ್ಯಪಾಡಿ ಪದವಿಗೆ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳು ಮಳೆಯ ಕಾರಣದಿಂದಾಗಿ ಮುಚ್ಚಿ ಹೋಗಿದ್ದು ಊರಿಗೆ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳಲ್ಲಿಯೂ ಸಂಚಾರವಿರದೆ ಹೊರಗಡೆಯಿಂದ ಸಂಪರ್ಕ ಕಳೆದುಕೊಳ್ಳುವ ಭೀತಿಯಿಂದ ಜನರು ಇದ್ದಾರೆ.


ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅದ್ಯಪಾಡಿ ಪದವಿನಿಂದ ಬಜಪೆಗೆ ಹೋಗುವಂತಹ ರಸ್ತೆಯಲ್ಲಿ ಗುಡ್ಡೆ ಬಿರಿದು ಪೂರ್ಣ ರಸ್ತೆಯ ಮೇಲೆ ಮಣ್ಣಿನ ರಾಶಿ ಆವರಿಸಿಕೊಂಡಿರುವುದರಿಂದ ಯಾವುದೇ ವಾಹನಗಳ ಸಂಚಾರ ಸಾಧ್ಯವಾಗುತ್ತಿಲ್ಲ.
ಅದೇ ರೀತಿ ಅದ್ಯಪಾಡಿ ಶಾಲೆಯಿಂದ ಕೆಂಜಾರು ಕಡೆ ಹೋಗುವ ರಸ್ತೆಯಲ್ಲಿ ಕಾಂಕ್ರೀಟ್ ಕೆಳಭಾಗದಿಂದ ಮಣ್ಣು ಕುಸಿದು ಹೋಗಿದ್ದು, ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ರಸ್ತೆಯ ಕೆಳಭಾಗದಿಂದ ಮಣ್ಣು ಸರಿದು ಹೋಗಲು ರಭಸವಾಗಿ ಹರಿದ ನೀರು ಕಾರಣವಾಗಿದ್ದು, ಹಲವು ಮಂದಿ ಏರ್ಪೋರ್ಟ್ ಮೇಲೆ ಕೂಡ ಆರೋಪವನ್ನು ಹೊರಿಸುತ್ತಿದ್ದಾರೆ.


ಸ್ಥಳಕ್ಕೆ ಶಾಸಕ ಡಾ.ವೈ.ಭರತ್ ಶೆಟ್ಟಿ ಭೇಟಿಯನ್ನು ನೀಡಿದ್ದಾರೆ. ಒಟ್ಟಿನಲ್ಲಿ ಅದ್ಯಪಾಡಿಯ ಜನತೆಗೀಗ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳನ್ನು ಉಪಯೋಗಿಸಲಾಗದೆ ಅಸಹಾಯಕ ಪರಿಸ್ಥಿತಿಯಲ್ಲಿದ್ದು, ಆಡಳಿತ ವ್ಯವಸ್ಥೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ತ್ವರಿತ ಕ್ರಮವನ್ನು ತೆಗೆದುಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು