6:32 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನಿರಂತರ ಮಳೆ: ಅಥಣಿಯಲ್ಲಿ ಸಾವಿರಾರು ಎಕರೆ ದ್ರಾಕ್ಷೆ ಬೆಳೆ ನಾಶ; ಆಕಾಶದತ್ತ ಮುಖ ಮಾಡಿದ ರೈತರು

25/11/2021, 15:20

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಾಯುಭಾರ  ಕುಸಿತದಿಂದ ರಾಜ್ಯಾದ್ಯಂತ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ರಾಜ್ಯದಲ್ಲಿ ರೈತನ ಕಷ್ಟ ಹೇಳಿ ತೀರದು.ಉತ್ತರ ಕರ್ನಟಕದಲ್ಲಿ ಮಳೆ ಏನೋ ಕಡಿಮೆ ಇದೆ, ಆದರೆ ಮೋಡ ಕವಿದ ವಾತಾವರಣದಿಂದ ವಾಣಿಜ್ಯ ಬೆಳೆ ದ್ರಾಕ್ಷಿ ಈಗ ರೋಗಕ್ಕೆ ತುತ್ತಾಗಿ ಬೆಳೆ ಸಂಪೂರ್ಣ ನಾಶವಾಗಿದೆ.


ಕೋವಿಡನಿಂದ್ ಸತತ ಎರಡು ವರ್ಷ ನಷ್ಟ ಅನುಭವಿಸಿದ ರೈತ ಈಗಲಾದರೂ ಲಾಭ ಆಗಬಹುದು ಎಂದು ರಾತ್ರಿ-ಹಗಲು ಕಷ್ಟಪಟ್ಟು ಇನ್ನೇನು ಬೆಳೆ ಚೆನ್ನಾಗಿ ಬಂತು ಅನ್ನೋವಷ್ಟರಲ್ಲಿ ಪ್ರಕೃತಿ ವಿಕೋಪಕ್ಕೆ ರೈತ ಬಲಿಪಶು ಆಗಿದ್ದಾನೆ.

ತುಂತುರು ಮಳೆಗೆ ದ್ರಾಕ್ಷಿ ಬೆಳೆ ಸಂಪೂರ್ಣ ಕೊಳೆತುಹೋಗಿವೆ. ಎಕರೆಗೆ ಸುಮಾರು ಎರಡರಿಂದ ಮೂರು ಲಕ್ಷ ರೂಪಾಯಿ ಖರ್ಚಾಗಿದ್ದು ಈಗ ಒಂದು ರೂಪಾಯಿ ಕೂಡ ನಮಗಿಲ್ಲ.  ಸೂಕ್ತ ಪರಿಹಾರ ಒದಗಿಸುವುದಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮದ ರೈತ ಪಾಂಡುರಂಗಹಬಗುಂಡೆ ಮಾಧ್ಯಮದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.

ಅಥಣಿ ತಾಲೂಕಿನ ಅನಂತಪುರ ಹೂಬಳಿ ವ್ಯಾಪ್ತಿಯಲ್ಲಿ ಸುಮಾರು 100ರಿಂದ 200 ಎಕರೆ ದ್ರಾಕ್ಷಿ ಬೆಳೆದ ರೈತರಿಗೆ ಅಪಾರ ಪ್ರಮಾಣದ ನಷ್ಟವಾಗಿದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಪರಿಹಾರ ಒದಗಿಸಿ ಎಂದು ಮಾಂತೇಶ್ ಚಿಗ್ರೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಗ್ರಾಮದ ರೈತರಾದ ಪ್ರವೀಣ್ ಪವಾರ ಮಾತನಾಡಿ ನಾನು ಸುಮಾರು 60 ಲಕ್ಷ ಖರ್ಚು ಮಾಡಿ ದ್ರಾಕ್ಷಿ ಬೆಳೆ ಬೆಳೆದಿದ್ದೇನೆ. ಬಡ್ಡಿ ಸಹಿತ ಬಂದಿಲ್ಲ ಎಂದು ನೋವನ್ನ ಹಂಚಿಕೊಂಡರು ಏನೆ ಆಗಲಿ ನೊಂದ ರೈತರ ಕೈ ಹಿಡಿಯುತ್ತ ಸರ್ಕಾರ ಅನ್ನೋದನ್ನ ಕಾದು ನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು