7:58 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ನೀರಾವರಿ ಇಲಾಖೆ 2 ಸಾವಿರ ಕೋಟಿ ಅವ್ಯವಹಾರ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ಆಪ್ತನ ಮನೆ ಸೇರಿದಂತೆ 50 ಕಡೆಗಳಲ್ಲಿ ಐಟಿ ದಾಳಿ

07/10/2021, 13:00

ಬೆಂಗಳೂರು(reporterkarnataka.com) : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್‌ ಅವರ ನಗರದ

ಬಾಷ್ಯಂ ಸರ್ಕಲ್‌ನಲ್ಲಿರುವ ಮನೆಯ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 50 ಕಡೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಬಾಷ್ಯಂ ಸರ್ಕಲ್‌ನಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಉಮೇಶ್‌ ವಾಸವಾಗಿದ್ದರು. ಐಟಿ ದಾಳಿಯ ವೇಳೆಯಲ್ಲಿ ಉಮೇಶ್‌ ಮನೆಯಲ್ಲಿದ್ದರು ಎಂಬ ಮಾಹಿತಿ ಇದೆ.

ಉಮೇಶ್‌ ಅವರು ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆಯೂ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಬಿಎಂಟಿಸಿಯಲ್ಲಿ ಡ್ರೈವರ್‌/ ಕಂಡಕ್ಟರ್‌ ಆಗಿದ್ದ ಉಮೇಶ್‌ ಡೆಪ್ಯುಟೇಷನ್‌ ಆಧಾರದ ಮೇಲೆ ಯಡಿಯೂರಪ್ಪ ಅವರ ಆಪ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಯಡಿಯೂರಪ್ಪ ಪ್ರತಿಪಕ್ಷದ ನಾಯಕರಾಗಿದ್ದಾಗಲೂ ಸೇವೆ ಸಲ್ಲಿಸಿದ್ದರು.

ಯಡಿಯೂರಪ್ಪ ಅವರ ಆಡಳಿತ ಕಾಲದಲ್ಲಿ ನೀರಾವರಿ ಇಲಾಖೆಯಲ್ಲಿ ಸುಮಾರು 2 ಎರಡು ಸಾವಿರ ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ನೀರಾವರಿ ಇಲಾಖೆಯ ಟೆಂಡರ್‌, ಬಿಲ್‌ ಪಾಸ್‌ ಮಾಡಿರುವುದಕ್ಕೆ ಸಂಬಂಧಿಸಿದಂತೆ ಎಲ್ಲಾ ವ್ಯವಹಾರಗಳನ್ನೂ ಉಮೇಶ್‌ ಅವರೇ ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಉಮೇಶ್‌ ಅವರು ಗುತ್ತಿಗೆದಾರರು ಸಿಮೆಂಟ್‌ ಡೀಲರ್‌ ಗಳ ಸಂಪರ್ಕ ಹೊಂದಿದ್ದರು. ಚಾರ್ಟೆಡ್‌ ಅಕೌಂಟೆಂಟ್‌ಗಳು ಜೊತೆಗೆ ಸಂಪರ್ಕ ಟ್ಯಾಕ್ಸ್‌ ವಂಚನೆ ನಡೆಸಿರುವ ಆರೋಪ ಕೇಳಿ ಬಂದಿದೆ.‌ ಈ ಕುರಿತು ತನಿಖೆಯಿಂದಲೇ ಹೆಚ್ಚಿನ ವಿವರ ತಿಳಿದು ಬರಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು