11:06 AM Wednesday23 - October 2024
ಬ್ರೇಕಿಂಗ್ ನ್ಯೂಸ್
ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ…

ಇತ್ತೀಚಿನ ಸುದ್ದಿ

ನೀರಾವರಿ ಇಲಾಖೆ 2 ಸಾವಿರ ಕೋಟಿ ಅವ್ಯವಹಾರ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ಆಪ್ತನ ಮನೆ ಸೇರಿದಂತೆ 50 ಕಡೆಗಳಲ್ಲಿ ಐಟಿ ದಾಳಿ

07/10/2021, 13:00

ಬೆಂಗಳೂರು(reporterkarnataka.com) : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್‌ ಅವರ ನಗರದ

ಬಾಷ್ಯಂ ಸರ್ಕಲ್‌ನಲ್ಲಿರುವ ಮನೆಯ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 50 ಕಡೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಬಾಷ್ಯಂ ಸರ್ಕಲ್‌ನಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಉಮೇಶ್‌ ವಾಸವಾಗಿದ್ದರು. ಐಟಿ ದಾಳಿಯ ವೇಳೆಯಲ್ಲಿ ಉಮೇಶ್‌ ಮನೆಯಲ್ಲಿದ್ದರು ಎಂಬ ಮಾಹಿತಿ ಇದೆ.

ಉಮೇಶ್‌ ಅವರು ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆಯೂ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಬಿಎಂಟಿಸಿಯಲ್ಲಿ ಡ್ರೈವರ್‌/ ಕಂಡಕ್ಟರ್‌ ಆಗಿದ್ದ ಉಮೇಶ್‌ ಡೆಪ್ಯುಟೇಷನ್‌ ಆಧಾರದ ಮೇಲೆ ಯಡಿಯೂರಪ್ಪ ಅವರ ಆಪ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಯಡಿಯೂರಪ್ಪ ಪ್ರತಿಪಕ್ಷದ ನಾಯಕರಾಗಿದ್ದಾಗಲೂ ಸೇವೆ ಸಲ್ಲಿಸಿದ್ದರು.

ಯಡಿಯೂರಪ್ಪ ಅವರ ಆಡಳಿತ ಕಾಲದಲ್ಲಿ ನೀರಾವರಿ ಇಲಾಖೆಯಲ್ಲಿ ಸುಮಾರು 2 ಎರಡು ಸಾವಿರ ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ನೀರಾವರಿ ಇಲಾಖೆಯ ಟೆಂಡರ್‌, ಬಿಲ್‌ ಪಾಸ್‌ ಮಾಡಿರುವುದಕ್ಕೆ ಸಂಬಂಧಿಸಿದಂತೆ ಎಲ್ಲಾ ವ್ಯವಹಾರಗಳನ್ನೂ ಉಮೇಶ್‌ ಅವರೇ ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಉಮೇಶ್‌ ಅವರು ಗುತ್ತಿಗೆದಾರರು ಸಿಮೆಂಟ್‌ ಡೀಲರ್‌ ಗಳ ಸಂಪರ್ಕ ಹೊಂದಿದ್ದರು. ಚಾರ್ಟೆಡ್‌ ಅಕೌಂಟೆಂಟ್‌ಗಳು ಜೊತೆಗೆ ಸಂಪರ್ಕ ಟ್ಯಾಕ್ಸ್‌ ವಂಚನೆ ನಡೆಸಿರುವ ಆರೋಪ ಕೇಳಿ ಬಂದಿದೆ.‌ ಈ ಕುರಿತು ತನಿಖೆಯಿಂದಲೇ ಹೆಚ್ಚಿನ ವಿವರ ತಿಳಿದು ಬರಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು