11:44 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ನೀರಾವರಿ ಇಲಾಖೆ 2 ಸಾವಿರ ಕೋಟಿ ಅವ್ಯವಹಾರ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ಆಪ್ತನ ಮನೆ ಸೇರಿದಂತೆ 50 ಕಡೆಗಳಲ್ಲಿ ಐಟಿ ದಾಳಿ

07/10/2021, 13:00

ಬೆಂಗಳೂರು(reporterkarnataka.com) : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್‌ ಅವರ ನಗರದ

ಬಾಷ್ಯಂ ಸರ್ಕಲ್‌ನಲ್ಲಿರುವ ಮನೆಯ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 50 ಕಡೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಬಾಷ್ಯಂ ಸರ್ಕಲ್‌ನಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಉಮೇಶ್‌ ವಾಸವಾಗಿದ್ದರು. ಐಟಿ ದಾಳಿಯ ವೇಳೆಯಲ್ಲಿ ಉಮೇಶ್‌ ಮನೆಯಲ್ಲಿದ್ದರು ಎಂಬ ಮಾಹಿತಿ ಇದೆ.

ಉಮೇಶ್‌ ಅವರು ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆಯೂ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಬಿಎಂಟಿಸಿಯಲ್ಲಿ ಡ್ರೈವರ್‌/ ಕಂಡಕ್ಟರ್‌ ಆಗಿದ್ದ ಉಮೇಶ್‌ ಡೆಪ್ಯುಟೇಷನ್‌ ಆಧಾರದ ಮೇಲೆ ಯಡಿಯೂರಪ್ಪ ಅವರ ಆಪ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಯಡಿಯೂರಪ್ಪ ಪ್ರತಿಪಕ್ಷದ ನಾಯಕರಾಗಿದ್ದಾಗಲೂ ಸೇವೆ ಸಲ್ಲಿಸಿದ್ದರು.

ಯಡಿಯೂರಪ್ಪ ಅವರ ಆಡಳಿತ ಕಾಲದಲ್ಲಿ ನೀರಾವರಿ ಇಲಾಖೆಯಲ್ಲಿ ಸುಮಾರು 2 ಎರಡು ಸಾವಿರ ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ನೀರಾವರಿ ಇಲಾಖೆಯ ಟೆಂಡರ್‌, ಬಿಲ್‌ ಪಾಸ್‌ ಮಾಡಿರುವುದಕ್ಕೆ ಸಂಬಂಧಿಸಿದಂತೆ ಎಲ್ಲಾ ವ್ಯವಹಾರಗಳನ್ನೂ ಉಮೇಶ್‌ ಅವರೇ ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಉಮೇಶ್‌ ಅವರು ಗುತ್ತಿಗೆದಾರರು ಸಿಮೆಂಟ್‌ ಡೀಲರ್‌ ಗಳ ಸಂಪರ್ಕ ಹೊಂದಿದ್ದರು. ಚಾರ್ಟೆಡ್‌ ಅಕೌಂಟೆಂಟ್‌ಗಳು ಜೊತೆಗೆ ಸಂಪರ್ಕ ಟ್ಯಾಕ್ಸ್‌ ವಂಚನೆ ನಡೆಸಿರುವ ಆರೋಪ ಕೇಳಿ ಬಂದಿದೆ.‌ ಈ ಕುರಿತು ತನಿಖೆಯಿಂದಲೇ ಹೆಚ್ಚಿನ ವಿವರ ತಿಳಿದು ಬರಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು