6:37 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ನಿರ್ಭಯ ಮಾದರಿ ಗ್ಯಾಂಗ್ ರೇಪ್‌ಗೆ ಸಾಕ್ಷಿಯಾದ ಬೆಂಗಳೂರು : ಯುವತಿಯ ಗುಪ್ತಾಂಗಕ್ಕೆ ಬಾಟಲಿ ತುರುಕಿ ವಿಕೃತಿ ಮೆರೆದ ಕಾಮುಕರು

28/05/2021, 14:10

ಬೆಂಗಳೂರು (Reporter Karnataka News) ಯುವತಿಯೊಬ್ಬಳ ಮೇಲೆ ಸಾಮೂಹಿಕವಾಗಿ ಪೈಶಾಚಿಕ ರೀತಿಯಲ್ಲಿ ಅತ್ಯಾಚಾರ ನಡೆಸಿ ವೀಡಿಯೋ ಮಾಡಿ ಹರಿಯ ಬಿಟ್ಟು ವಿಕೃತಿ ಮೆರೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ತಾವು ಮಾಡಿದ ಹೇಯ ಕೃತ್ಯವನ್ನು ತಾವೇ ಜಾಲತಾಣಗಳಿಗೆ ಹರಿಬಿಟ್ಟ ಮೇಲಷ್ಟೇ ಈ ಗ್ಯಾಂಗ್ ರೇಪ್ ಪ್ರಕರಣ ಸುದ್ದಿಯಾಗಿದೆ.

ಯುವತಿಯ ಮೇಲೆ ಭಯಾನಕವಾಗಿ ಹಲ್ಲೆ ನಡೆಸಿದ ದುರುಳರು ಆಕೆಯ ಗುಪ್ತಾಂಗಕ್ಕೆ ಮದ್ಯದ ಬಾಡಲ್ ತುರುಕಿ ವಿಕೃತಿ ಮೆರೆದಿದ್ದಾರೆ.

ಈ ಭೀಕರ ಕೃತ್ಯಕ್ಕೆ ಒಬ್ಬ ಮಹಿಳೆಯೂ ಕೈಜೋಡಿಸಿರುವುದು ವೈರಲ್ ಆದ ವಿಡಿಯೋದಿಂದ ಬೆಳಕಿಗೆ ಬಂದಿದೆ. ಸುಮಾರು ಹತ್ತು ದಿನಗಳ ಹಿಂದೆ ಈ ಪ್ರಕರಣ ನಡೆದಿದ್ದು ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಪೊಲೀಸರ ಮೂಲಕ ಈ ವಿಷಯ ಬೆಂಗಳೂರಿನ ಪೊಲೀಸರಿಗೆ ತಿಳಿದುಬಂದಿದೆ. ಈ ಪೈಶಾಚಿಕ ಕೃತ್ಯ ನಡೆಸಿದವರು ಬಂಗಾಲಿ ಭಾಷೆ ಮಾತನಾಡುತ್ತಿದ ಕಾರಣ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಅಸ್ಸಾಂ ಯುವತಿಯ ಮೇಲೆ ಬಾಂಗ್ಲಾದೇಶೀಯರ ದೌರ್ಜನ್ಯ ಎಂಬ ಆಕ್ರೋಶವೂ ಅಲ್ಲಿ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ತನಿಖೆ ನಡೆಸಿದಾಗ ಈ ಕೃತ್ಯ ಬೆಂಗಳೂರಿನಲ್ಲಿ ನಡೆದಿರುವ ವಿಷಯ ಬೆಳಕಿಗೆ ಬಂದಿದೆ.

ಬೆಂಗಳೂರು ಪೊಲೀಸರ ಪ್ರಕಾರ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಮತ್ತು ಆರೋಪಿಗಳು ಬಾಂಗ್ಲಾದೇಶ ಮೂಲದವರಾಗಿದ್ದು, ಅಕ್ರಮವಾಗಿ ಭಾರತ ಪ್ರವೇಶಿಸಿದ್ದರು ಎಂಬ ಮಾಹಿತಿ ಇದೆ. ರಾಮಮೂರ್ತಿ ನಗರದ NRI ಕಾಲೊನಿಯಲ್ಲಿ ವಾಸಿಸುತ್ತಿದ್ದ ಈ ಗುಂಪು, ಅಲ್ಲಿಯೇ ವೇಶ್ಯಾವಾಟಿಕೆಯಲ್ಲಿ ತೊಡಗಿತ್ತು ಎನ್ನಲಾಗಿದೆ. ಸಂತ್ರಸ್ತೆ ಮೇಲಿನ ದ್ವೇಷದಿಂದ ಈ ಯುವಕರು ಈ ಪೈಶಾಚಿಕ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಸದ್ಯ ಬೆಂಗಳೂರು ಪೊಲೀಸರು ಅತ್ಯಾಚಾರಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಾಂಗ್ಲಾ ಮೂಲದ ಸಾಗರ್ , ಮೊಹಮ್ಮದ್ ಬಾಬಾ ಶೇಕ್ ರಿದಾಯ್ ಬಾಬು ಹಾಗೂ ಹೈದರಾಬಾದ್ ಮೂಲದ ಹಕೀಲ್‌ನನ್ನು ವಶಕ್ಕೆ ಪಡೆಯಲಾಗಿದೆ . ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ . ಸಂತ್ರಸ್ಥೆ ಕೂಡ ನಾಪತ್ತೆಯಾಗಿದ್ದಾಳೆ. ಆಕೆಗಾಗಿಯೂ ಹುಡುಕಾಟ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು