4:10 AM Friday13 - June 2025
ಬ್ರೇಕಿಂಗ್ ನ್ಯೂಸ್
Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ… ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ:… ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ…

ಇತ್ತೀಚಿನ ಸುದ್ದಿ

ನಿರ್ಭಯ ಮಾದರಿ ಗ್ಯಾಂಗ್ ರೇಪ್‌ಗೆ ಸಾಕ್ಷಿಯಾದ ಬೆಂಗಳೂರು : ಯುವತಿಯ ಗುಪ್ತಾಂಗಕ್ಕೆ ಬಾಟಲಿ ತುರುಕಿ ವಿಕೃತಿ ಮೆರೆದ ಕಾಮುಕರು

28/05/2021, 14:10

ಬೆಂಗಳೂರು (Reporter Karnataka News) ಯುವತಿಯೊಬ್ಬಳ ಮೇಲೆ ಸಾಮೂಹಿಕವಾಗಿ ಪೈಶಾಚಿಕ ರೀತಿಯಲ್ಲಿ ಅತ್ಯಾಚಾರ ನಡೆಸಿ ವೀಡಿಯೋ ಮಾಡಿ ಹರಿಯ ಬಿಟ್ಟು ವಿಕೃತಿ ಮೆರೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ತಾವು ಮಾಡಿದ ಹೇಯ ಕೃತ್ಯವನ್ನು ತಾವೇ ಜಾಲತಾಣಗಳಿಗೆ ಹರಿಬಿಟ್ಟ ಮೇಲಷ್ಟೇ ಈ ಗ್ಯಾಂಗ್ ರೇಪ್ ಪ್ರಕರಣ ಸುದ್ದಿಯಾಗಿದೆ.

ಯುವತಿಯ ಮೇಲೆ ಭಯಾನಕವಾಗಿ ಹಲ್ಲೆ ನಡೆಸಿದ ದುರುಳರು ಆಕೆಯ ಗುಪ್ತಾಂಗಕ್ಕೆ ಮದ್ಯದ ಬಾಡಲ್ ತುರುಕಿ ವಿಕೃತಿ ಮೆರೆದಿದ್ದಾರೆ.

ಈ ಭೀಕರ ಕೃತ್ಯಕ್ಕೆ ಒಬ್ಬ ಮಹಿಳೆಯೂ ಕೈಜೋಡಿಸಿರುವುದು ವೈರಲ್ ಆದ ವಿಡಿಯೋದಿಂದ ಬೆಳಕಿಗೆ ಬಂದಿದೆ. ಸುಮಾರು ಹತ್ತು ದಿನಗಳ ಹಿಂದೆ ಈ ಪ್ರಕರಣ ನಡೆದಿದ್ದು ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಪೊಲೀಸರ ಮೂಲಕ ಈ ವಿಷಯ ಬೆಂಗಳೂರಿನ ಪೊಲೀಸರಿಗೆ ತಿಳಿದುಬಂದಿದೆ. ಈ ಪೈಶಾಚಿಕ ಕೃತ್ಯ ನಡೆಸಿದವರು ಬಂಗಾಲಿ ಭಾಷೆ ಮಾತನಾಡುತ್ತಿದ ಕಾರಣ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಅಸ್ಸಾಂ ಯುವತಿಯ ಮೇಲೆ ಬಾಂಗ್ಲಾದೇಶೀಯರ ದೌರ್ಜನ್ಯ ಎಂಬ ಆಕ್ರೋಶವೂ ಅಲ್ಲಿ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ತನಿಖೆ ನಡೆಸಿದಾಗ ಈ ಕೃತ್ಯ ಬೆಂಗಳೂರಿನಲ್ಲಿ ನಡೆದಿರುವ ವಿಷಯ ಬೆಳಕಿಗೆ ಬಂದಿದೆ.

ಬೆಂಗಳೂರು ಪೊಲೀಸರ ಪ್ರಕಾರ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಮತ್ತು ಆರೋಪಿಗಳು ಬಾಂಗ್ಲಾದೇಶ ಮೂಲದವರಾಗಿದ್ದು, ಅಕ್ರಮವಾಗಿ ಭಾರತ ಪ್ರವೇಶಿಸಿದ್ದರು ಎಂಬ ಮಾಹಿತಿ ಇದೆ. ರಾಮಮೂರ್ತಿ ನಗರದ NRI ಕಾಲೊನಿಯಲ್ಲಿ ವಾಸಿಸುತ್ತಿದ್ದ ಈ ಗುಂಪು, ಅಲ್ಲಿಯೇ ವೇಶ್ಯಾವಾಟಿಕೆಯಲ್ಲಿ ತೊಡಗಿತ್ತು ಎನ್ನಲಾಗಿದೆ. ಸಂತ್ರಸ್ತೆ ಮೇಲಿನ ದ್ವೇಷದಿಂದ ಈ ಯುವಕರು ಈ ಪೈಶಾಚಿಕ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಸದ್ಯ ಬೆಂಗಳೂರು ಪೊಲೀಸರು ಅತ್ಯಾಚಾರಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಾಂಗ್ಲಾ ಮೂಲದ ಸಾಗರ್ , ಮೊಹಮ್ಮದ್ ಬಾಬಾ ಶೇಕ್ ರಿದಾಯ್ ಬಾಬು ಹಾಗೂ ಹೈದರಾಬಾದ್ ಮೂಲದ ಹಕೀಲ್‌ನನ್ನು ವಶಕ್ಕೆ ಪಡೆಯಲಾಗಿದೆ . ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ . ಸಂತ್ರಸ್ಥೆ ಕೂಡ ನಾಪತ್ತೆಯಾಗಿದ್ದಾಳೆ. ಆಕೆಗಾಗಿಯೂ ಹುಡುಕಾಟ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು