10:47 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ನಿರ್ಭಯ ಮಾದರಿ ಗ್ಯಾಂಗ್ ರೇಪ್‌ಗೆ ಸಾಕ್ಷಿಯಾದ ಬೆಂಗಳೂರು : ಯುವತಿಯ ಗುಪ್ತಾಂಗಕ್ಕೆ ಬಾಟಲಿ ತುರುಕಿ ವಿಕೃತಿ ಮೆರೆದ ಕಾಮುಕರು

28/05/2021, 14:10

ಬೆಂಗಳೂರು (Reporter Karnataka News) ಯುವತಿಯೊಬ್ಬಳ ಮೇಲೆ ಸಾಮೂಹಿಕವಾಗಿ ಪೈಶಾಚಿಕ ರೀತಿಯಲ್ಲಿ ಅತ್ಯಾಚಾರ ನಡೆಸಿ ವೀಡಿಯೋ ಮಾಡಿ ಹರಿಯ ಬಿಟ್ಟು ವಿಕೃತಿ ಮೆರೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ತಾವು ಮಾಡಿದ ಹೇಯ ಕೃತ್ಯವನ್ನು ತಾವೇ ಜಾಲತಾಣಗಳಿಗೆ ಹರಿಬಿಟ್ಟ ಮೇಲಷ್ಟೇ ಈ ಗ್ಯಾಂಗ್ ರೇಪ್ ಪ್ರಕರಣ ಸುದ್ದಿಯಾಗಿದೆ.

ಯುವತಿಯ ಮೇಲೆ ಭಯಾನಕವಾಗಿ ಹಲ್ಲೆ ನಡೆಸಿದ ದುರುಳರು ಆಕೆಯ ಗುಪ್ತಾಂಗಕ್ಕೆ ಮದ್ಯದ ಬಾಡಲ್ ತುರುಕಿ ವಿಕೃತಿ ಮೆರೆದಿದ್ದಾರೆ.

ಈ ಭೀಕರ ಕೃತ್ಯಕ್ಕೆ ಒಬ್ಬ ಮಹಿಳೆಯೂ ಕೈಜೋಡಿಸಿರುವುದು ವೈರಲ್ ಆದ ವಿಡಿಯೋದಿಂದ ಬೆಳಕಿಗೆ ಬಂದಿದೆ. ಸುಮಾರು ಹತ್ತು ದಿನಗಳ ಹಿಂದೆ ಈ ಪ್ರಕರಣ ನಡೆದಿದ್ದು ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಪೊಲೀಸರ ಮೂಲಕ ಈ ವಿಷಯ ಬೆಂಗಳೂರಿನ ಪೊಲೀಸರಿಗೆ ತಿಳಿದುಬಂದಿದೆ. ಈ ಪೈಶಾಚಿಕ ಕೃತ್ಯ ನಡೆಸಿದವರು ಬಂಗಾಲಿ ಭಾಷೆ ಮಾತನಾಡುತ್ತಿದ ಕಾರಣ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಅಸ್ಸಾಂ ಯುವತಿಯ ಮೇಲೆ ಬಾಂಗ್ಲಾದೇಶೀಯರ ದೌರ್ಜನ್ಯ ಎಂಬ ಆಕ್ರೋಶವೂ ಅಲ್ಲಿ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ತನಿಖೆ ನಡೆಸಿದಾಗ ಈ ಕೃತ್ಯ ಬೆಂಗಳೂರಿನಲ್ಲಿ ನಡೆದಿರುವ ವಿಷಯ ಬೆಳಕಿಗೆ ಬಂದಿದೆ.

ಬೆಂಗಳೂರು ಪೊಲೀಸರ ಪ್ರಕಾರ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಮತ್ತು ಆರೋಪಿಗಳು ಬಾಂಗ್ಲಾದೇಶ ಮೂಲದವರಾಗಿದ್ದು, ಅಕ್ರಮವಾಗಿ ಭಾರತ ಪ್ರವೇಶಿಸಿದ್ದರು ಎಂಬ ಮಾಹಿತಿ ಇದೆ. ರಾಮಮೂರ್ತಿ ನಗರದ NRI ಕಾಲೊನಿಯಲ್ಲಿ ವಾಸಿಸುತ್ತಿದ್ದ ಈ ಗುಂಪು, ಅಲ್ಲಿಯೇ ವೇಶ್ಯಾವಾಟಿಕೆಯಲ್ಲಿ ತೊಡಗಿತ್ತು ಎನ್ನಲಾಗಿದೆ. ಸಂತ್ರಸ್ತೆ ಮೇಲಿನ ದ್ವೇಷದಿಂದ ಈ ಯುವಕರು ಈ ಪೈಶಾಚಿಕ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಸದ್ಯ ಬೆಂಗಳೂರು ಪೊಲೀಸರು ಅತ್ಯಾಚಾರಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಾಂಗ್ಲಾ ಮೂಲದ ಸಾಗರ್ , ಮೊಹಮ್ಮದ್ ಬಾಬಾ ಶೇಕ್ ರಿದಾಯ್ ಬಾಬು ಹಾಗೂ ಹೈದರಾಬಾದ್ ಮೂಲದ ಹಕೀಲ್‌ನನ್ನು ವಶಕ್ಕೆ ಪಡೆಯಲಾಗಿದೆ . ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ . ಸಂತ್ರಸ್ಥೆ ಕೂಡ ನಾಪತ್ತೆಯಾಗಿದ್ದಾಳೆ. ಆಕೆಗಾಗಿಯೂ ಹುಡುಕಾಟ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು