10:53 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ನೀರಿದ್ದ ರಸ್ತೆಯಲ್ಲಿ ಸ್ಕೂಟಿ ಸ್ಕಿಡ್: ನೆಲಕ್ಕೆ ಬಿದ್ದ ಯುವತಿ ವಿದ್ಯುತ್ ಕಂಬ ಹಿಡೆದಾಗ ಕರೆಂಟ್ ಶಾಕ್ ಹೊಡೆದು ಸಾವು

06/09/2022, 18:44

ಬೆಂಗಳೂರು(reporterkarnataka.com): ಬಿಬಿಎಂಪಿ ಹಾಗೂ ಬೆಸ್ಕಾಂ ನಿರ್ಲಕ್ಷ್ಯದಿಂದ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಸಾವು ಸಂಭವಿಸಿದೆ. ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಯುವತಿ ಸಾವನ್ನಪ್ಪಿದ್ದಾರೆ. ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯ ಸಿದ್ದಾಪುರದಲ್ಲಿ ಈ ದುರ್ಘಟನೆ ನಡೆದಿದೆ.

ನೀರು ನಿಂತ ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದೆ. ಸ್ಕೂಟಿ ರೈಡ್ ಮಾಡುತ್ತಿದ್ದ ಯುವತಿ ಮೇಲೆಳಲು ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬವನ್ನು ಆಶ್ರಯಿಸಿದಾಗ ವಿದ್ಯುತ್ ಹರಿದು ಯುವತಿ ಸಾವನ್ನಪ್ಪಿದ್ದಾರೆ. ಮೃತಪಟ್ಟ ಯುವತಿಯನ್ನು ಅಖಿಲಾ (23) ಎಂದು ಗುರುತಿಸಲಾಗಿದೆ.

ಸೋಮವಾರ ರಾತ್ರಿ 9 ಗಂಟೆ ಸಮಯದಲ್ಲಿ ವೈಟ್ ಫೀಲ್ಡ್ -ಮಾರತಹಳ್ಳಿ ಮುಖ್ಯರಸ್ತೆಯ ಸಿದ್ದಾಪುರದಲ್ಲಿ ಘಟನೆ ನಡೆದಿದೆ. ಭಾರಿ ಮಳೆಯ ಕಾರಣ ರಸ್ತೆಯಲ್ಲಿ ನೀರು ನಿಂತಿತ್ತು.

ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಖಿಲಾ, ಸ್ಕೂಟಿಯಲ್ಲಿ ಮನೆಗೆ ಮರಳುತ್ತಿದ್ದರು. ನೀರು ನಿಂತ ರಸ್ತೆಯಲ್ಲಿ ಸ್ಕೂಟಿ ಸ್ಕಿಡ್ ಆಗಿ ಬಿದ್ದಿದೆ.

ಈ ಸಂದರ್ಭದಲ್ಲಿ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬ ಹಿಡಿದಿದ್ದು, ಮೈಮೇಲೆ ವಿದ್ಯುತ್ ಹರಿದಿದೆ ಎಂದು ತಿಳಿದುಬಂದಿದೆ.

ವಿದ್ಯುತ್ ಕಂಬಗಳ ನಿರ್ವಹಣೆ ಸರಿಯಾಗಿ ಇಲ್ಲದೇ ಇರುವುದೇ ದುರ್ಘಟನೆಗೆ ಕಾರಣ ಎಂದು ಕುಟುಂಬಸ್ಥರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ವೈಟ್ ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆ ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು