2:00 AM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ನಿರ್ಮಿತಿ ಕೇಂದ್ರದಿಂದ ನಿರ್ಮಾಣವಾದ ಕಳಪೆ ಶೌಚಾಲಯ: ಸಿಡಿದೆದ್ದ ಶಾಸಕರಿಂದ ಅಧಿಕಾರಿಗಳ ತರಾಟೆ

07/12/2024, 20:55

*ಏನ್ರೀ ಇದು.. ಎಲ್ಲರೂ ಸೇರಿಕೊಂಡು ಆಟ ಆಡ್ತಾ ಇದ್ದೀರಾ...!*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕೈ ಮತ್ತು ಕಾಲಿನಲ್ಲಿ ಟಚ್ ಮಾಡಿದ್ರೆ ಸಾಕು ಪೈಪ್ ಗಳು ಕಿತ್ತು ಬರುತ್ತಿವೆ. ಏನ್ರೀ ಇದು ಎಲ್ಲರೂ ಸೇರಿಕೊಂಡು ಆಟ ಆಡ್ತಾ ಇದ್ದೀರಾ ಎಂದು ಅಧಿಕಾರಿಗಳ ವಿರುದ್ಧ ಶಾಸಕ ದರ್ಶನ್ ಧ್ರುವನಾರಾಯಣ್ ಗುಡುಗಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿರ್ಮಿತಿ ಕೇಂದ್ರದಿಂದ ನಿರ್ಮಾಣ ಮಾಡಲಾಗಿದ್ದ, ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ 4 ಕೊಠಡಿಗಳು ಮತ್ತು 3 ಶೌಚಾಲಯ ಕಟ್ಟಡವನ್ನು ಉದ್ಘಾಟನೆ ಮಾಡಲು ಬಂದ ಶಾಸಕ ದರ್ಶನ್ ಧ್ರುವನಾರಾಯಣ್ ಶೌಚಾಲಯದ ಕಳಪೆ ಕಾಮಗಾರಿಯನ್ನು ನೋಡಿ ಶಾಕ್ ಆಗಿದ್ದಾರೆ. ಟೇಪ್ ಕತ್ತರಿಸಿ ಉದ್ಘಾಟನೆ ಮಾಡಿದ ಬಳಿಕ ಪರಿಶೀಲನೆ ನಡೆಸಿದ ಅವರು ಶೌಚಾಲಯಕ್ಕೆ ಅಳವಡಿಸಿರುವ ವಸ್ತುಗಳು ಕ್ವಾಲಿಟಿ ಇಲ್ಲ, ಕಳಪೆ ಗುಣಮಟ್ಟದ ಕಾಮಗಾರಿ ನಡೆಸಲಾಗಿದೆ. ಸರಿಯಾಗಿ ಕೆಲಸ ಮಾಡದೆ ಎಲ್ಲರೂ ಆಟ ಆಡ್ತಾ ಇದ್ದೀರಾ…! ಏನ್ರೀ ಇದು ಕಾಮಗಾರಿ..? ಇಂತಹ ಕಳಪೆ ಕಾಮಗಾರಿ ಉದ್ಘಾಟನೆ ಮಾಡಲು ಏಕೆ ಕರೆದಿದ್ದೀರಾ.. ಎಂದು ನಿರ್ಮಿತಿ ಕೇಂದ್ರದ ಅಧಿಕಾರಿ ಮತ್ತು ಗುತ್ತಿಗೆದಾರರನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಹಿಗ್ಗಾ ಮಗ್ಗ ತರಾಟೆಗೆ ತೆಗೆದುಕೊಂಡರು ಈ ಕೂಡಲೇ ಗುಣಮಟ್ಟದ ವಸ್ತುಗಳನ್ನು ಅಳವಡಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಖಡಕ್ ಸೂಚನೆ ನೀಡಿದರು.
ಇದೇ ಸಂದರ್ಭ ನಂಜನಗೂಡು ನಗರದ ನಗರಸಭಾ ವ್ಯಾಪ್ತಿಯಲ್ಲಿ ಸುಮಾರು 1.62 ಕೋಟಿ ರೂ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಗುದ್ದಲಿಪೂಜೆ ನೇರವೇರಿಸಿದರು.


ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಶಾಸಕ ದರ್ಶನ್ ದೃವನಾರಾಯಣ್ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ಉಪಾಧ್ಯಕ್ಷೆ ರಿಯಾನಾ ಬಾನು, ನಗರಸಭಾ ಪೌರಯುಕ್ತರಾದ ನಂಜುಂಡಸ್ವಾಮಿ, ನಗರಸಭಾ ಸದಸ್ಯರಾದ ಮಹೇಶ್, ನಗರಸಭಾ ಇಂಜಿನಿಯರ್ ಮಹೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು