5:54 PM Sunday28 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ನಿಷ್ಕ್ರಿಯ- ನಿರ್ಲಿಪ್ತ- ಭ್ರಷ್ಟ ಶಾಸಕರಿಗಿಲ್ಲ ಬಿಜೆಪಿ ಟಿಕೆಟ್: ದ.ಕ. ಜಿಲ್ಲೆಯ 3 ಮಂದಿ ಹಾಲಿಗಳಿಗೆ ಕೊಕ್? 

15/04/2022, 13:14

ಬೆಂಗಳೂರು(reporterkarnataka.com): ಒಂದು ಕಡೆ ಈಶ್ವರಪ್ಪ ಪ್ರಕರಣ ಆಡಳಿತರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದರೆ, ಇನ್ನೊಂದು ಕಡೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಕಮಲ ಪಾಳಯದಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಟಿಕೆಟ್ ಹಂಚಿಕೆಯ ಪಾರಮರ್ಶೆ ಪ್ರಕ್ರಿಯೆ ಆರಂಭಗೊಂಡಿದೆ. ಕಳೆದ ಬಾರಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಸೇರಿದಂತೆ ಎರಡು ಡಜನಿಗೂ ಅಧಿಕ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸುವ ಸಾಧ್ಯತೆಗಳಿವೆ. ಇದರಲ್ಲಿ ದ.ಕ. ಜಿಲ್ಲೆಯ 3 ಮಂದಿ ಹಾಲಿ ಶಾಸಕರು ಕೂಡ ಸೇರಿದ್ದಾರೆ ಎಂದು ತಿಳಿದು ಬಂದಿದೆ.

ಚುನಾವಣಾ ಸಿದ್ಧತೆಯ ಅಂಗವಾಗಿ ಬಿಜೆಪಿಯ ವಿಭಾಗೀಯ ಮಟ್ಟದ ಸಭೆ ಈಗಾಗಲೇ ನಡೆದಿದೆ. ಮಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದರೆ, ಮೈಸೂರಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ಪೂರ್ಣಗೊಂಡಿದೆ. ಇನ್ನು ಟಿಕೆಟ್ ಹಂಚಿಕೆ ಕುರಿತಂತೆ

ಕ್ಷೇತ್ರವಾರು ಸಮೀಕ್ಷೆ ನಡೆಯಲಿದೆ. ಪ್ರತಿ ಕ್ಷೇತ್ರದ ಸಮೀಕ್ಷೆಗೆ 9 ಮಂದಿಯ ತಂಡ ಇರುತ್ತದೆ. ಇವರು ಬಿಜೆಪಿ ಹಾಲಿ ಶಾಸಕರ ಹಾಗೂ ಬಿಜೆಪಿ ಸೋತ ಕ್ಷೇತ್ರದಲ್ಲಿ ಹೊಸ ಅಭ್ಯರ್ಥಿಗಳ ಒರೆಗೆ ಹಚ್ಚಲಿದ್ದಾರೆ. ಈ ಬಾರಿ ಯಾರದೇ ಪ್ರಭಾವ ಟಿಕೆಟ್ ಹಂಚಿಕೆಯಲ್ಲಿ ನಡೆಯೋದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರಿಂದ

ಆರಂಭಗೊಂಡು ಮುಖ್ಯಮಂತ್ರಿವರೆಗೆ ಯಾರದೇ ಪ್ರಭಾವ ಕೆಲಸ ಮಾಡೊಲ್ಲ. ಸಮೀಕ್ಷಾ ತಂಡ ನೀಡುವ ವರದಿಯೇ ಅಂತಿಮವಾಗಿರುತ್ತದೆ. ಈಶ್ವರಪ್ಪ ಪ್ರಕರಣದಿಂದ ಬಿಜೆಪಿ ಸಾಕಷ್ಟು ಕಲಿತಿದೆ. ಯಾಕೆಂದರೆ ಈಶ್ವರಪ್ಪ ಹೊರಗಿನಿಂದ ಬಂದವರಲ್ಲ, ಮೂಲತಃ ಬಿಜೆಪಿಯವರೇ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹೆಸರಿನಲ್ಲಿ ಗೆದ್ದು, ಭ್ರಷ್ಟಾಚಾರದಲ್ಲಿ ತೊಡಗಿಕೊಂಡ ಶಾಸಕರಿಗೆ ಕಡ್ಡಾಯವಾಗಿ ಟಿಕೆಟ್ ನಿರಾಕರಿಸಲು ಪಕ್ಷದ ಹೈಕಮಾಂಡ್ ಸೂಚಿಸಿದೆ ಎಂದು ತಿಳಿದು ಬಂದಿದೆ.

ಕಾರ್ಯನಿರ್ವಹಣೆ, ಸುಧಾರಣೆ, ಬದಲಾವಣೆ ಈ ಬಾರಿ ಬಿಜೆಪಿಯ ಧ್ಯೇಯವಾಕ್ಯವಾಗಿದೆ. ಹಾಲಿ ಶಾಸಕರ ಕಾರ್ಯನಿರ್ವಹಣೆ, ಸುಧಾರಣೆ ಹಾಗೂ ಬದಲಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಮತ್ತೆ ಟಿಕೆಟ್ ಹಂಚಲಾಗುವುದು. ಹಾಗೆ ನಿಷ್ಕ್ರಿಯ, ನಿರ್ಲಿಪ್ತ ಹಾಗೂ ಭ್ರಷ್ಟ ಶಾಸಕರಿಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗುವುದು.  ಅಷ್ಟೇ ಅಲ್ಲದೆ ಪಕ್ಷದ ಹೆಸರು, ಚಿಹ್ನೆಯ ಬಲವಿಲ್ಲದೆ ಸ್ವಂತ ಶಕ್ತಿಯಿಂದ ಗೆಲ್ಲಬಲ್ಲ ಅಭ್ಯರ್ಥಿಗೆ ಟಿಕೆಟ್ ನೀಡಲಾಗುವುದು ಎಂದು ಪಕ್ಷದ ಬಲ್ಲಮೂಲಗಳಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು