9:44 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ನಿಷ್ಕ್ರಿಯ- ನಿರ್ಲಿಪ್ತ- ಭ್ರಷ್ಟ ಶಾಸಕರಿಗಿಲ್ಲ ಬಿಜೆಪಿ ಟಿಕೆಟ್: ದ.ಕ. ಜಿಲ್ಲೆಯ 3 ಮಂದಿ ಹಾಲಿಗಳಿಗೆ ಕೊಕ್? 

15/04/2022, 13:14

ಬೆಂಗಳೂರು(reporterkarnataka.com): ಒಂದು ಕಡೆ ಈಶ್ವರಪ್ಪ ಪ್ರಕರಣ ಆಡಳಿತರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದರೆ, ಇನ್ನೊಂದು ಕಡೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಕಮಲ ಪಾಳಯದಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಟಿಕೆಟ್ ಹಂಚಿಕೆಯ ಪಾರಮರ್ಶೆ ಪ್ರಕ್ರಿಯೆ ಆರಂಭಗೊಂಡಿದೆ. ಕಳೆದ ಬಾರಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಸೇರಿದಂತೆ ಎರಡು ಡಜನಿಗೂ ಅಧಿಕ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸುವ ಸಾಧ್ಯತೆಗಳಿವೆ. ಇದರಲ್ಲಿ ದ.ಕ. ಜಿಲ್ಲೆಯ 3 ಮಂದಿ ಹಾಲಿ ಶಾಸಕರು ಕೂಡ ಸೇರಿದ್ದಾರೆ ಎಂದು ತಿಳಿದು ಬಂದಿದೆ.

ಚುನಾವಣಾ ಸಿದ್ಧತೆಯ ಅಂಗವಾಗಿ ಬಿಜೆಪಿಯ ವಿಭಾಗೀಯ ಮಟ್ಟದ ಸಭೆ ಈಗಾಗಲೇ ನಡೆದಿದೆ. ಮಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದರೆ, ಮೈಸೂರಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ಪೂರ್ಣಗೊಂಡಿದೆ. ಇನ್ನು ಟಿಕೆಟ್ ಹಂಚಿಕೆ ಕುರಿತಂತೆ

ಕ್ಷೇತ್ರವಾರು ಸಮೀಕ್ಷೆ ನಡೆಯಲಿದೆ. ಪ್ರತಿ ಕ್ಷೇತ್ರದ ಸಮೀಕ್ಷೆಗೆ 9 ಮಂದಿಯ ತಂಡ ಇರುತ್ತದೆ. ಇವರು ಬಿಜೆಪಿ ಹಾಲಿ ಶಾಸಕರ ಹಾಗೂ ಬಿಜೆಪಿ ಸೋತ ಕ್ಷೇತ್ರದಲ್ಲಿ ಹೊಸ ಅಭ್ಯರ್ಥಿಗಳ ಒರೆಗೆ ಹಚ್ಚಲಿದ್ದಾರೆ. ಈ ಬಾರಿ ಯಾರದೇ ಪ್ರಭಾವ ಟಿಕೆಟ್ ಹಂಚಿಕೆಯಲ್ಲಿ ನಡೆಯೋದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರಿಂದ

ಆರಂಭಗೊಂಡು ಮುಖ್ಯಮಂತ್ರಿವರೆಗೆ ಯಾರದೇ ಪ್ರಭಾವ ಕೆಲಸ ಮಾಡೊಲ್ಲ. ಸಮೀಕ್ಷಾ ತಂಡ ನೀಡುವ ವರದಿಯೇ ಅಂತಿಮವಾಗಿರುತ್ತದೆ. ಈಶ್ವರಪ್ಪ ಪ್ರಕರಣದಿಂದ ಬಿಜೆಪಿ ಸಾಕಷ್ಟು ಕಲಿತಿದೆ. ಯಾಕೆಂದರೆ ಈಶ್ವರಪ್ಪ ಹೊರಗಿನಿಂದ ಬಂದವರಲ್ಲ, ಮೂಲತಃ ಬಿಜೆಪಿಯವರೇ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹೆಸರಿನಲ್ಲಿ ಗೆದ್ದು, ಭ್ರಷ್ಟಾಚಾರದಲ್ಲಿ ತೊಡಗಿಕೊಂಡ ಶಾಸಕರಿಗೆ ಕಡ್ಡಾಯವಾಗಿ ಟಿಕೆಟ್ ನಿರಾಕರಿಸಲು ಪಕ್ಷದ ಹೈಕಮಾಂಡ್ ಸೂಚಿಸಿದೆ ಎಂದು ತಿಳಿದು ಬಂದಿದೆ.

ಕಾರ್ಯನಿರ್ವಹಣೆ, ಸುಧಾರಣೆ, ಬದಲಾವಣೆ ಈ ಬಾರಿ ಬಿಜೆಪಿಯ ಧ್ಯೇಯವಾಕ್ಯವಾಗಿದೆ. ಹಾಲಿ ಶಾಸಕರ ಕಾರ್ಯನಿರ್ವಹಣೆ, ಸುಧಾರಣೆ ಹಾಗೂ ಬದಲಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಮತ್ತೆ ಟಿಕೆಟ್ ಹಂಚಲಾಗುವುದು. ಹಾಗೆ ನಿಷ್ಕ್ರಿಯ, ನಿರ್ಲಿಪ್ತ ಹಾಗೂ ಭ್ರಷ್ಟ ಶಾಸಕರಿಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗುವುದು.  ಅಷ್ಟೇ ಅಲ್ಲದೆ ಪಕ್ಷದ ಹೆಸರು, ಚಿಹ್ನೆಯ ಬಲವಿಲ್ಲದೆ ಸ್ವಂತ ಶಕ್ತಿಯಿಂದ ಗೆಲ್ಲಬಲ್ಲ ಅಭ್ಯರ್ಥಿಗೆ ಟಿಕೆಟ್ ನೀಡಲಾಗುವುದು ಎಂದು ಪಕ್ಷದ ಬಲ್ಲಮೂಲಗಳಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು