11:15 AM Wednesday17 - December 2025
ಬ್ರೇಕಿಂಗ್ ನ್ಯೂಸ್
Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ…

ಇತ್ತೀಚಿನ ಸುದ್ದಿ

ನಿಷ್ಠರಿಗೆ ಸಚಿವ ಸ್ಥಾನ: ದಿಲ್ಲಿಯಲ್ಲಿ ವರಿಷ್ಠರ ಮುಂದೆ ಸಿದ್ದು-ಡಿಕೆಶಿ ಲಾಬಿ; ಪೇಚಿಗೆ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್

25/05/2023, 18:56

ಮೃದುಲಾ ನಾಯರ್ ಹೊಸದಿಲ್ಲಿ

info.reporterkarnataka@gmail.com

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರದಿಂದ ದೆಹಲಿಯಲ್ಲಿ ಭೀಡುಬಿಟ್ಟಿದ್ದು, ವರಿಷ್ಠರ ಜತೆ ಒಂದರ ಮೇಲೊಂದು ಸಭೆ ನಡೆಯುತ್ತಲೇ ಇದೆ. ತಮ್ಮ ಆಪ್ತರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಚಿವ ಸ್ಥಾನ ನೀಡಿ ತಮ್ಮ ಪ್ರಾಬಲ್ಯ ಹೆಚ್ಚಿಸಿಕೊಳ್ಳುವ ಜಿದ್ದಿಗೆ ಸಿಎಂ ಮತ್ತು ಡಿಸಿಎಂ ಬಿದ್ದಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಕಗ್ಗಂಟಾಗಿ ಪರಿಣಮಿಸಿದೆ.

ಬೆಂಗಳೂರಿನಲ್ಲಿ ಬುಧವಾರ ಸ್ಪೀಕರ್ ಆಯ್ಕೆ ನಡೆದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಅವರು ಒಂದೇ ವಿಮಾನದಲ್ಲಿ ದಿಲ್ಲಿಗೆ ಹೋಗಿದ್ದರು. ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಮುನ್ನ ಬುಧವಾರ ರಾತ್ರಿಯೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವರಿಷ್ಠರನ್ನು ಭೇಟಿ ಮಾಡಿ ತಮ್ಮ ಆಪ್ತರಿಗೆ ಸಚಿವ ಸ್ಥಾನ ನೀಡುವಂತೆ ಲಾಬಿ ನಡೆಸಿದ್ದಾರೆ ಎಂಬ ಮಾಹಿತಿ ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ.
ಸಿದ್ದರಾಮಯ್ಯ ಭೇಟಿಗೂ ಮೊದಲೇ ಶಿವಕುಮಾರ್ ಮತ್ತು ಅವರ ತಮ್ಮ ಸಂಸದ ಡಿ.ಕೆ ಸುರೇಶ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಂದು ರಾತ್ರಿಯೊಳಗೆ ನೂತನ ಸಚಿವರ ಪಟ್ಟಿ ಸಿದ್ದವಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು