6:29 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸುರತ್ಕಲ್ ಎನ್ ಐಟಿಕೆಯಲ್ಲಿ “ಸುಸ್ಥಿರ ಕೃಷಿ ಭವಿಷ್ಯ” ಕುರಿತ ವಿಚಾರ ಸಂಕಿರಣ

28/01/2025, 22:45

ಸುರತ್ಕಲ್(reporterkarnataka.com): ಎನ್ಐಟಿಕೆ ಸ್ಕೂಲ್ ಆಫ್ ಹ್ಯುಮಾನಿಟೀಸ್, ಸೋಷಿಯಲ್ ಸೈನ್ಸಸ್ ಮತ್ತು ಮ್ಯಾನೇಜ್ಮೆಂಟ್ ವತಿಯಿಂದ 2025ರ ಜನವರಿ 28 ಮತ್ತು 29ರಂದು ಸುಸ್ಥಿರ ಕೃಷಿ ಭವಿಷ್ಯ ಎಂಬ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.
ಸ್ಪಾರ್ಕ್ ಪ್ರಾಯೋಜಿತ ಯೋಜನೆಯಡಿ ಎನ್ ಐಟಿಕೆ ಸುರತ್ಕಲ್ ನ ಪ್ರೊ.ರಿತಾಂಜಲಿ ಮಾಝಿ ಮತ್ತು ಯುಕೆಯ ಎಸೆಕ್ಸ್ ವಿಶ್ವವಿದ್ಯಾಲಯದ ಪ್ರೊ. ನೀರಜ್ ಕುಮಾರ್ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ರೈತರ ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಹೆಚ್ಚಿಸಲು ಕೃಷಿ-ಆಹಾರ ವ್ಯವಸ್ಥೆಗಳಲ್ಲಿ ವೃತ್ತಾಕಾರದ ಆರ್ಥಿಕ ತತ್ವಗಳನ್ನು ಸಂಯೋಜಿಸುವತ್ತ ಗಮನ ಹರಿಸಲಾಗಿದೆ.
“ಬೀಜಗಳನ್ನು ಬಿತ್ತನೆ ಮಾಡುವುದು” (“Sowing the Seeds”) ಎಂಬ ಶೀರ್ಷಿಕೆಯ ಉದ್ಘಾಟನಾ ಸಮಾರಂಭದಲ್ಲಿ ನೀತಿ ಆಯೋಗದ ವೃತ್ತಾಕಾರದ ಆರ್ಥಿಕ ಕೋಶದ ನಿರ್ದೇಶಕ ಶ್ರೀ ಅಮಿತ್ ವರ್ಮಾ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶ್ರೀ ವರ್ಮಾ ಅವರು ತಮ್ಮ ಮುಖ್ಯ ಭಾಷಣದಲ್ಲಿ ಭಾರತದ ನಾವೀನ್ಯತೆ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ, ರೈತರಲ್ಲಿ ಸುಸ್ಥಿರ ಕೃಷಿ ಪದ್ಧತಿಗಳನ್ನು ಪ್ರೋತ್ಸಾಹಿಸುವ ಮತ್ತು ವೃತ್ತಾಕಾರದ ಆರ್ಥಿಕತೆಯಲ್ಲಿ ಭಾರತವನ್ನು ಜಾಗತಿಕ ನಾಯಕತ್ವದತ್ತ ಕೊಂಡೊಯ್ಯುವ ನಿರ್ಣಾಯಕ ಅಗತ್ಯವನ್ನು ಒತ್ತಿ ಹೇಳಿದರು.
ಗೌರವಾನ್ವಿತ ಅತಿಥಿಗಳಾದ ಕರ್ನಾಟಕ ರಾಜ್ಯ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ ಚನ್ನಪ್ಪ ಅಂಗಡಿ ಮತ್ತು ಎಸೆಕ್ಸ್ ವಿಶ್ವವಿದ್ಯಾಲಯದ ಪ್ರೊ.ನೀರಜ್ ಕುಮಾರ್ ಅವರು ಸುಸ್ಥಿರ ಕೃಷಿ ಮತ್ತು ಕೃಷಿಯಲ್ಲಿ ಕ್ರಾಂತಿಕಾರಕ ಬದಲಾವಣೆಯಲ್ಲಿ ನಾವೀನ್ಯತೆಯ ಪಾತ್ರದ ಬಗ್ಗೆ ತಮ್ಮ ಒಳನೋಟಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್ ಐಟಿಕೆ ಸುರತ್ಕಲ್ ನ ರಿಸರ್ಚ್ ಅಂಡ್ ಕನ್ಸಲ್ಟೆನ್ಸಿ ಡೀನ್ ಪ್ರೊ.ಉದಯ್ ಭಟ್ ಕೆ ವಹಿಸಿದ್ದರು. ಈ ವಿಚಾರ ಸಂಕಿರಣವನ್ನು ಎಂಆರ್ ಪಿಎಲ್ ಮತ್ತು ಮಂಗಳೂರಿನ ಎಂಸಿಎಫ್ ಜಂಟಿಯಾಗಿ ಪ್ರಾಯೋಜಿಸಿವೆ. ಹೆಚ್ಚುವರಿಯಾಗಿ, ಸುಸ್ಥಿರ ಕೃಷಿಯಲ್ಲಿ ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಜ್ಞಾನ ಮತ್ತು ಸಾಮರ್ಥ್ಯಗಳನ್ನು ಹೆಚ್ಚಿಸುವ ಗುರಿಯೊಂದಿಗೆ 2025 ರ ಜನವರಿ 20 ರಿಂದ 24 ರವರೆಗೆ ಸಾಮರ್ಥ್ಯ ವರ್ಧನೆ ಕಾರ್ಯಕ್ರಮವನ್ನು ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು