2:08 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ನಿಟ್ಟೆ ಯೂನಿವರ್ಸಿಟಿ ಕುಲಪತಿ, ನಿಟ್ಟೆ ಗ್ರೂಪ್ ಆಫ್ ಎಜುಕೇಶನಲ್ ಇನ್‌ಸ್ಟಿಟ್ಯೂಷನ್‌ಗಳ ಸ್ಥಾಪಕ ವಿನಯ ಹೆಗ್ಡೆ ನಿಧನ

01/01/2026, 10:48

ಮಂಗಳೂರು(reporterkarnataka.com): ನಿಟ್ಟೆ ಡೀಮ್ಡ್-ಟು-ಬಿ-ಯೂನಿವರ್ಸಿಟಿ ಕುಲಪತಿ ಮತ್ತು ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎನ್. ವಿನಯ್ ಹೆಗ್ಡೆ ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮಂಗಳೂರಿನ ಶಿವಭಾಗ್ ನಲ್ಲಿರುವ ನಿವಾಸದಲ್ಲಿ ನಿಧನರಾದರು. ಶಿವಬಾಗ್‌ನಲ್ಲಿರುವ ‘ಸದಾನಂದ’ ನಿವಾಸದಲ್ಲಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.
ಅವರಿಗೆ 86 ವರ್ಷ ವಯಸ್ಸಾಗಿತ್ತು ಮತ್ತು ಅವರು ಪತ್ನಿ ಸುಜಾತಾ ಹೆಗ್ಡೆ, ಪುತ್ರ ವಿಶಾಲ್ ಹೆಗ್ಡೆ ಮತ್ತು ಪುತ್ರಿ ಅಶ್ವಿತಾ ಪೂಂಜಾ ಅವರನ್ನು ಅಗಲಿದ್ದಾರೆ.
ವಿನಯ ಹೆಗ್ಡೆ ಅವರು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ, ಲೋಕಸಭೆ ಮಾಜಿ ಸ್ಪೀಕರ್ ದಿವಂಗತ ಕೆ.ಎಸ್. ಹೆಗ್ಡೆ ಅವರ ಪುತ್ರ.
ಕರ್ನಾಟಕ ಮಾಜಿ ಲೋಕಾಯುಕ್ತ ಮತ್ತು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎನ್. ಸಂತೋಷ್ ಹೆಗ್ಡೆ ಅವರ ಸಹೋದರರಾಗಿದ್ದರು.
ನಿಟ್ಟೆ ಗ್ರೂಪ್ ಆಫ್ ಎಜುಕೇಶನಲ್ ಇನ್‌ಸ್ಟಿಟ್ಯೂಷನ್‌ಗಳ ಸ್ಥಾಪಕರಾಗಿದ್ದಾರೆ.
ಹೆಗ್ಡೆ ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ 3 ಗಂಟೆಯವರೆಗೆ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ನಿಟ್ಟೆ ಶಿಕ್ಷಣ ಆವರಣದಲ್ಲಿ ಸಂಜೆ 4.30ರಿಂದ ಸಂಜೆ 6 ಗಂಟೆಗೆ ಅಂತಿಮ ದರ್ಶನಕ್ಕೆ ಇಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು