7:28 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ನಿವೃತ್ತ ಮುಖ್ಯೋಪಾಧ್ಯಾಯ ಮೊರಬನಹಳ್ಳಿ ಜಿ.ಲಕ್ಷ್ಮೀಪಾಲಪ್ಪ ಇನ್ನಿಲ್ಲ: ಗಣ್ಯರ ಸಂತಾಪ

10/09/2021, 17:26

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬನಹಳ್ಳಿ ಗ್ರಾಮದ ವಾಲ್ಮೀಕಿ ಸಮುದಾಯದ ಹಿರಿಯರು, ನಿವೃತ್ತ ಮುಖ್ಯೋಪಾಧ್ಯಾಯರಾದ ಜಿ.ಲಕ್ಷ್ಮೀಪಾಲಪ್ಪ(75) ಅವರು ಕೂಡ್ಲಿಗಿ ಪಟ್ಟಣದ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.

ಅವರು ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಮೃತರು ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರನ್ನು, ಅಪಾರ ಬಂಧು ಹಾಗೂ ಬಳಗವನ್ನು ಅಗಲಿದ್ದಾರೆ.

ಅವರು ಪ್ರೌಢಶಾಲಾ ವಿಭಾಗದಲ್ಲಿ ಆಂಗ್ಲಭಾಷೆ ಹಾಗೂ ವಿಜ್ಞಾನ ವಿಷಯದಲ್ಲಿ ಉಪಾಧ್ಯಾಯರಾಗಿದ್ದರು. ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕುಂಚೂರು,ಬಳ್ಳಾರಿಯ ಕುರುಗೋಡು, ಜೋಗಿಹಳ್ಳಿ, ಬಣವಿಕಲ್ಲು, ಕೂಡ್ಲಿಗಿ, ಹಿರೇಹೆಗ್ಡಾಳು ಗ್ರ‍ಾಮದಲ್ಲಿ ಹಾಗೂ ಇದಕ್ಕೂ ಮುನ್ನ ಬೇರೆ ಜಿಲ್ಲೆಗಳಲ್ಲಿ ತಮ್ಮ ಕರ್ಥವ್ಯ ನಿರ್ವಹಿಸಿದ್ದಾರೆ. ಅವರು ಹದಿನೈದು ವರ್ಷಗಳ ಹಿಂದೆ ಹಿರೇಹೆಗ್ಡಾಳು ಗ್ರಾಮದ ಪ್ರೌಢಶಾಲೆಯಲ್ಲಿ, ಮುಖ್ಯೋಪಾಧ್ಯಾಯರಾಗಿ ಕೆಲ ವರ್ಷಗಳ ಕಾಲ ಕರ್ಥವ್ಯ ನಿರ್ವಹಿಸಿ ನಂತರ ವಯೋ ನಿವೃತ್ತಿ ಹೊಂದಿದ್ದರು.

ಸಂತಾಪ: ಜಿ.ಲಕ್ಷ್ಮೀಪಾಲಪ್ಪರ ಅಗಲಿಕೆಗೆ ಕೂಡ್ಲಿಗಿ ತಾಲೂಕಿನ ವಾಲ್ಮೀಕಿ ಸಮುದಾಯದ ಹಿರಿಯರು, ವಿವಿಧ ಸಮುದಾಯಗಳ ಮುಖಂಡರು, ವಿವಿಧ

ಸಂಘ – ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ

ಪಕ್ಷಗಳ ಮುಖಂಡರು, ಸರ್ಕಾರಿ ನೌಕರರ ಸಂಘ ಹಾಗೂ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು. ವಿವಿಧ ಜನ ಪ್ರತಿನಿಧಿಗಳು, ಮುಖ್ಯೋಪಾಧ್ಯಾಯರ ಬಳಗ ಹಾಗೂ ಅವರ ಸ್ನೇಹ ಬಳಗ, ಕೂಡ್ಲಿಗಿ ಪಟ್ಟಣದ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಹಳೇ ವಿದ್ಯಾರ್ಥಿಗಳು ಹಾಗೂ ಜಿಲ್ಲೆಯ ವಿವಿಧ ಭಾಗದ ಅವರ ಶಿಷ್ಯಬಳಗ ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು