6:23 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ನಿವೃತ್ತ ಮುಖ್ಯೋಪಾಧ್ಯಾಯ ಮೊರಬನಹಳ್ಳಿ ಜಿ.ಲಕ್ಷ್ಮೀಪಾಲಪ್ಪ ಇನ್ನಿಲ್ಲ: ಗಣ್ಯರ ಸಂತಾಪ

10/09/2021, 17:26

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬನಹಳ್ಳಿ ಗ್ರಾಮದ ವಾಲ್ಮೀಕಿ ಸಮುದಾಯದ ಹಿರಿಯರು, ನಿವೃತ್ತ ಮುಖ್ಯೋಪಾಧ್ಯಾಯರಾದ ಜಿ.ಲಕ್ಷ್ಮೀಪಾಲಪ್ಪ(75) ಅವರು ಕೂಡ್ಲಿಗಿ ಪಟ್ಟಣದ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.

ಅವರು ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಮೃತರು ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರನ್ನು, ಅಪಾರ ಬಂಧು ಹಾಗೂ ಬಳಗವನ್ನು ಅಗಲಿದ್ದಾರೆ.

ಅವರು ಪ್ರೌಢಶಾಲಾ ವಿಭಾಗದಲ್ಲಿ ಆಂಗ್ಲಭಾಷೆ ಹಾಗೂ ವಿಜ್ಞಾನ ವಿಷಯದಲ್ಲಿ ಉಪಾಧ್ಯಾಯರಾಗಿದ್ದರು. ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕುಂಚೂರು,ಬಳ್ಳಾರಿಯ ಕುರುಗೋಡು, ಜೋಗಿಹಳ್ಳಿ, ಬಣವಿಕಲ್ಲು, ಕೂಡ್ಲಿಗಿ, ಹಿರೇಹೆಗ್ಡಾಳು ಗ್ರ‍ಾಮದಲ್ಲಿ ಹಾಗೂ ಇದಕ್ಕೂ ಮುನ್ನ ಬೇರೆ ಜಿಲ್ಲೆಗಳಲ್ಲಿ ತಮ್ಮ ಕರ್ಥವ್ಯ ನಿರ್ವಹಿಸಿದ್ದಾರೆ. ಅವರು ಹದಿನೈದು ವರ್ಷಗಳ ಹಿಂದೆ ಹಿರೇಹೆಗ್ಡಾಳು ಗ್ರಾಮದ ಪ್ರೌಢಶಾಲೆಯಲ್ಲಿ, ಮುಖ್ಯೋಪಾಧ್ಯಾಯರಾಗಿ ಕೆಲ ವರ್ಷಗಳ ಕಾಲ ಕರ್ಥವ್ಯ ನಿರ್ವಹಿಸಿ ನಂತರ ವಯೋ ನಿವೃತ್ತಿ ಹೊಂದಿದ್ದರು.

ಸಂತಾಪ: ಜಿ.ಲಕ್ಷ್ಮೀಪಾಲಪ್ಪರ ಅಗಲಿಕೆಗೆ ಕೂಡ್ಲಿಗಿ ತಾಲೂಕಿನ ವಾಲ್ಮೀಕಿ ಸಮುದಾಯದ ಹಿರಿಯರು, ವಿವಿಧ ಸಮುದಾಯಗಳ ಮುಖಂಡರು, ವಿವಿಧ

ಸಂಘ – ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ

ಪಕ್ಷಗಳ ಮುಖಂಡರು, ಸರ್ಕಾರಿ ನೌಕರರ ಸಂಘ ಹಾಗೂ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು. ವಿವಿಧ ಜನ ಪ್ರತಿನಿಧಿಗಳು, ಮುಖ್ಯೋಪಾಧ್ಯಾಯರ ಬಳಗ ಹಾಗೂ ಅವರ ಸ್ನೇಹ ಬಳಗ, ಕೂಡ್ಲಿಗಿ ಪಟ್ಟಣದ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಹಳೇ ವಿದ್ಯಾರ್ಥಿಗಳು ಹಾಗೂ ಜಿಲ್ಲೆಯ ವಿವಿಧ ಭಾಗದ ಅವರ ಶಿಷ್ಯಬಳಗ ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು