8:44 AM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

ನಿವೃತ್ತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಎಚ್.ಎಂ. ಪೂವಪ್ಪ ಅವರಿಗೆ ಬೀಳ್ಕೊಡುಗೆ

04/06/2023, 19:46

ಮಂಗಳೂರು(reporterkarnataka.com): ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿ ಬಜಪೆ ಪೊಲೀಸ್ ಠಾಣೆಯಲ್ಲಿ ನಿವೃತ್ತರಾದ ಎಚ್.ಎಂ.ಪೂವಪ್ಪ ಅವರಿಗೆ ಬೀಳ್ಕೊಡುಗೆ ನಡೆಯಿತು.
ಎಚ್.ಎಂ.ಪೂವಪ್ಪ ಅವರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಿದ ಮಂಗಳೂರು ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ಅವರು ಮಾತನಾಡಿ, ಉತ್ತಮ ಸೇವಾ ಹಿನ್ನೆಲೆಯೊಂದಿಗೆ ಎಚ್.ಎಂ. ಪೂವಪ್ಪ ಅವರು ಸೇವೆಯಿಂದ ನಿವೃತ್ತರಾಗುತ್ತಿರುವುದು ಸಂತೋಷದ ವಿಷಯ. ನಿವೃತ್ತ ಜೀವನದಲ್ಲಿ ಕುಟುಂಬದ ಸದಸ್ಯರೊಂದಿಗೆ ಸೇವಾ ಅವಧಿಯ ಒಳ್ಳೆಯ ಅನುಭವಗಳನ್ನು ಮೆಲುಕು ಹಾಕುತ್ತಾ ಸಂತೃಪ್ತ ಜೀವನ ನಡೆಸುವಂತೆ ಶುಭ ಹಾರೈಸಿದರು.


ಪೂವಪ್ಪ ಅವರು ನಡೆಸಿರುವ 38 ವರ್ಷ ಎರಡು ತಿಂಗಳ ಸೇವಾವಧಿ ಸುದೀರ್ಘವಾಗಿದೆ. ಪೊಲೀಸ್ ಇಲಾಖೆಯ ಅಧಿಕಾರಿಗಳು ತಮ್ಮ ಸೇವಾಅವಧಿಯ ಸುಮಾರು ಶೇ.70 ಬಾಗವನ್ನು ಇಲಾಖೆ ಸಿಬ್ಬಂದಿ ಜೊತೆಯಲ್ಲೇ ಸಮವಸ್ತ್ರದೊಂದಿಗೆ ಕಳೆದಿರುತ್ತಾರೆ. ಕುಟುಂಬದ ಜೊತೆಗೆ ಕಳೆದಿರುವುದು ಕಡಿಮೆ. ಈ ವೃತ್ತಿಯಲ್ಲಿ ಇಲಾಕೆ ಸಿಬ್ಬಂದಿ ಮತ್ತು ಕುಟುಂಬದ ಸದಸ್ಯರ ತ್ಯಾಗ ಅನನ್ಯವಗಿದೆ ಎಂದು ಅವರು ಹೇಳಿದರು.
ಇಲಾಖೆಯ ಗೌರವ ಸ್ವೀಕರಿಸಿ ಮಾತನಾಡಿದ ಎಚ್.ಎಂ.ಪೂವಪ್ಪ ಅವರು, ಬಜಪೆ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಆಗಿ 38 ವರ್ಷಗಳ ಹಿಂದೆ ವೃತ್ತಿ ಜೀವನ ಆರಂಭಿಸಿದ ತಾನು ಅದೇ ಬಜಪೆ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ನಿವೃತ್ತಿಯಾಗುತ್ತಿದ್ದೇನೆ. ಸೇವಾ ಅವಧಿಯನ್ನು ಪೂರ್ಣಗೊಳಿಸಿದ ಸಂತೃಪ್ತಿಯಿದೆ. ಇಲಾಖೆ ಹಿರಿಯ ಅಧಿಕಾರಿಗಳು, ಸಹದ್ಯೋಗಿ ಮಿತ್ರರು ತೋರಿದ ಪ್ರೀತಿ, ವಿಶ್ವಾಸ, ಸಹಕಾರಕ್ಕೆ ಅಭಾರಿಯಾಗಿದ್ದೇನೆ ಎಂದು ಹೇಳಿದರು.
ಹಿರಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನಿವೃತ್ತರ ಜೊತೆಗಿನ ಅನುಭವ ಹಂಚಿಕೊಂಡರು.
ಬಜಪೆ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸರ್ಕಲ್ ಇನ್ಸ್‌ಪೆಕ್ಟರ್ ಕೆ.ಆರ್.ನಾಯಕ್ ಕೆ.ಆರ್.ನಾಯಕ್ ಮುಖ್ಯ ಅತಿಥಿಗಳಾಗಿದ್ದರು. ನಿವೃತ್ತ ಎಚ್.ಎಂ.ಪೂವಪ್ಪ ಅವರ ಪತ್ನಿ ಶಕುಂತಳಾ ಪೂವಪ್ಪ ಅವರು ಉಪಸ್ಥಿತರಿದ್ದರು.
ನಿವೃತ್ತ ಸಬ್ ಇನ್ಸ್‌ಪೆಕ್ಟರ್ ರಾಜಾರಾಂ ಕಾರ್ಯಕ್ರಮ ನಿರ್ವಹಿಸಿದರು. ಕೆಂಚಪ್ಪ ವಂದಿಸಿದರು.
…..

ಇತ್ತೀಚಿನ ಸುದ್ದಿ

ಜಾಹೀರಾತು