3:22 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ನಿವೃತ್ತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಎಚ್.ಎಂ. ಪೂವಪ್ಪ ಅವರಿಗೆ ಬೀಳ್ಕೊಡುಗೆ

04/06/2023, 19:46

ಮಂಗಳೂರು(reporterkarnataka.com): ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿ ಬಜಪೆ ಪೊಲೀಸ್ ಠಾಣೆಯಲ್ಲಿ ನಿವೃತ್ತರಾದ ಎಚ್.ಎಂ.ಪೂವಪ್ಪ ಅವರಿಗೆ ಬೀಳ್ಕೊಡುಗೆ ನಡೆಯಿತು.
ಎಚ್.ಎಂ.ಪೂವಪ್ಪ ಅವರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಿದ ಮಂಗಳೂರು ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ಅವರು ಮಾತನಾಡಿ, ಉತ್ತಮ ಸೇವಾ ಹಿನ್ನೆಲೆಯೊಂದಿಗೆ ಎಚ್.ಎಂ. ಪೂವಪ್ಪ ಅವರು ಸೇವೆಯಿಂದ ನಿವೃತ್ತರಾಗುತ್ತಿರುವುದು ಸಂತೋಷದ ವಿಷಯ. ನಿವೃತ್ತ ಜೀವನದಲ್ಲಿ ಕುಟುಂಬದ ಸದಸ್ಯರೊಂದಿಗೆ ಸೇವಾ ಅವಧಿಯ ಒಳ್ಳೆಯ ಅನುಭವಗಳನ್ನು ಮೆಲುಕು ಹಾಕುತ್ತಾ ಸಂತೃಪ್ತ ಜೀವನ ನಡೆಸುವಂತೆ ಶುಭ ಹಾರೈಸಿದರು.


ಪೂವಪ್ಪ ಅವರು ನಡೆಸಿರುವ 38 ವರ್ಷ ಎರಡು ತಿಂಗಳ ಸೇವಾವಧಿ ಸುದೀರ್ಘವಾಗಿದೆ. ಪೊಲೀಸ್ ಇಲಾಖೆಯ ಅಧಿಕಾರಿಗಳು ತಮ್ಮ ಸೇವಾಅವಧಿಯ ಸುಮಾರು ಶೇ.70 ಬಾಗವನ್ನು ಇಲಾಖೆ ಸಿಬ್ಬಂದಿ ಜೊತೆಯಲ್ಲೇ ಸಮವಸ್ತ್ರದೊಂದಿಗೆ ಕಳೆದಿರುತ್ತಾರೆ. ಕುಟುಂಬದ ಜೊತೆಗೆ ಕಳೆದಿರುವುದು ಕಡಿಮೆ. ಈ ವೃತ್ತಿಯಲ್ಲಿ ಇಲಾಕೆ ಸಿಬ್ಬಂದಿ ಮತ್ತು ಕುಟುಂಬದ ಸದಸ್ಯರ ತ್ಯಾಗ ಅನನ್ಯವಗಿದೆ ಎಂದು ಅವರು ಹೇಳಿದರು.
ಇಲಾಖೆಯ ಗೌರವ ಸ್ವೀಕರಿಸಿ ಮಾತನಾಡಿದ ಎಚ್.ಎಂ.ಪೂವಪ್ಪ ಅವರು, ಬಜಪೆ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಆಗಿ 38 ವರ್ಷಗಳ ಹಿಂದೆ ವೃತ್ತಿ ಜೀವನ ಆರಂಭಿಸಿದ ತಾನು ಅದೇ ಬಜಪೆ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ನಿವೃತ್ತಿಯಾಗುತ್ತಿದ್ದೇನೆ. ಸೇವಾ ಅವಧಿಯನ್ನು ಪೂರ್ಣಗೊಳಿಸಿದ ಸಂತೃಪ್ತಿಯಿದೆ. ಇಲಾಖೆ ಹಿರಿಯ ಅಧಿಕಾರಿಗಳು, ಸಹದ್ಯೋಗಿ ಮಿತ್ರರು ತೋರಿದ ಪ್ರೀತಿ, ವಿಶ್ವಾಸ, ಸಹಕಾರಕ್ಕೆ ಅಭಾರಿಯಾಗಿದ್ದೇನೆ ಎಂದು ಹೇಳಿದರು.
ಹಿರಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನಿವೃತ್ತರ ಜೊತೆಗಿನ ಅನುಭವ ಹಂಚಿಕೊಂಡರು.
ಬಜಪೆ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸರ್ಕಲ್ ಇನ್ಸ್‌ಪೆಕ್ಟರ್ ಕೆ.ಆರ್.ನಾಯಕ್ ಕೆ.ಆರ್.ನಾಯಕ್ ಮುಖ್ಯ ಅತಿಥಿಗಳಾಗಿದ್ದರು. ನಿವೃತ್ತ ಎಚ್.ಎಂ.ಪೂವಪ್ಪ ಅವರ ಪತ್ನಿ ಶಕುಂತಳಾ ಪೂವಪ್ಪ ಅವರು ಉಪಸ್ಥಿತರಿದ್ದರು.
ನಿವೃತ್ತ ಸಬ್ ಇನ್ಸ್‌ಪೆಕ್ಟರ್ ರಾಜಾರಾಂ ಕಾರ್ಯಕ್ರಮ ನಿರ್ವಹಿಸಿದರು. ಕೆಂಚಪ್ಪ ವಂದಿಸಿದರು.
…..

ಇತ್ತೀಚಿನ ಸುದ್ದಿ

ಜಾಹೀರಾತು