4:56 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನಿವೃತ್ತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಎಚ್.ಎಂ. ಪೂವಪ್ಪ ಅವರಿಗೆ ಬೀಳ್ಕೊಡುಗೆ

04/06/2023, 19:46

ಮಂಗಳೂರು(reporterkarnataka.com): ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿ ಬಜಪೆ ಪೊಲೀಸ್ ಠಾಣೆಯಲ್ಲಿ ನಿವೃತ್ತರಾದ ಎಚ್.ಎಂ.ಪೂವಪ್ಪ ಅವರಿಗೆ ಬೀಳ್ಕೊಡುಗೆ ನಡೆಯಿತು.
ಎಚ್.ಎಂ.ಪೂವಪ್ಪ ಅವರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಿದ ಮಂಗಳೂರು ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ಅವರು ಮಾತನಾಡಿ, ಉತ್ತಮ ಸೇವಾ ಹಿನ್ನೆಲೆಯೊಂದಿಗೆ ಎಚ್.ಎಂ. ಪೂವಪ್ಪ ಅವರು ಸೇವೆಯಿಂದ ನಿವೃತ್ತರಾಗುತ್ತಿರುವುದು ಸಂತೋಷದ ವಿಷಯ. ನಿವೃತ್ತ ಜೀವನದಲ್ಲಿ ಕುಟುಂಬದ ಸದಸ್ಯರೊಂದಿಗೆ ಸೇವಾ ಅವಧಿಯ ಒಳ್ಳೆಯ ಅನುಭವಗಳನ್ನು ಮೆಲುಕು ಹಾಕುತ್ತಾ ಸಂತೃಪ್ತ ಜೀವನ ನಡೆಸುವಂತೆ ಶುಭ ಹಾರೈಸಿದರು.


ಪೂವಪ್ಪ ಅವರು ನಡೆಸಿರುವ 38 ವರ್ಷ ಎರಡು ತಿಂಗಳ ಸೇವಾವಧಿ ಸುದೀರ್ಘವಾಗಿದೆ. ಪೊಲೀಸ್ ಇಲಾಖೆಯ ಅಧಿಕಾರಿಗಳು ತಮ್ಮ ಸೇವಾಅವಧಿಯ ಸುಮಾರು ಶೇ.70 ಬಾಗವನ್ನು ಇಲಾಖೆ ಸಿಬ್ಬಂದಿ ಜೊತೆಯಲ್ಲೇ ಸಮವಸ್ತ್ರದೊಂದಿಗೆ ಕಳೆದಿರುತ್ತಾರೆ. ಕುಟುಂಬದ ಜೊತೆಗೆ ಕಳೆದಿರುವುದು ಕಡಿಮೆ. ಈ ವೃತ್ತಿಯಲ್ಲಿ ಇಲಾಕೆ ಸಿಬ್ಬಂದಿ ಮತ್ತು ಕುಟುಂಬದ ಸದಸ್ಯರ ತ್ಯಾಗ ಅನನ್ಯವಗಿದೆ ಎಂದು ಅವರು ಹೇಳಿದರು.
ಇಲಾಖೆಯ ಗೌರವ ಸ್ವೀಕರಿಸಿ ಮಾತನಾಡಿದ ಎಚ್.ಎಂ.ಪೂವಪ್ಪ ಅವರು, ಬಜಪೆ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಆಗಿ 38 ವರ್ಷಗಳ ಹಿಂದೆ ವೃತ್ತಿ ಜೀವನ ಆರಂಭಿಸಿದ ತಾನು ಅದೇ ಬಜಪೆ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ನಿವೃತ್ತಿಯಾಗುತ್ತಿದ್ದೇನೆ. ಸೇವಾ ಅವಧಿಯನ್ನು ಪೂರ್ಣಗೊಳಿಸಿದ ಸಂತೃಪ್ತಿಯಿದೆ. ಇಲಾಖೆ ಹಿರಿಯ ಅಧಿಕಾರಿಗಳು, ಸಹದ್ಯೋಗಿ ಮಿತ್ರರು ತೋರಿದ ಪ್ರೀತಿ, ವಿಶ್ವಾಸ, ಸಹಕಾರಕ್ಕೆ ಅಭಾರಿಯಾಗಿದ್ದೇನೆ ಎಂದು ಹೇಳಿದರು.
ಹಿರಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನಿವೃತ್ತರ ಜೊತೆಗಿನ ಅನುಭವ ಹಂಚಿಕೊಂಡರು.
ಬಜಪೆ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸರ್ಕಲ್ ಇನ್ಸ್‌ಪೆಕ್ಟರ್ ಕೆ.ಆರ್.ನಾಯಕ್ ಕೆ.ಆರ್.ನಾಯಕ್ ಮುಖ್ಯ ಅತಿಥಿಗಳಾಗಿದ್ದರು. ನಿವೃತ್ತ ಎಚ್.ಎಂ.ಪೂವಪ್ಪ ಅವರ ಪತ್ನಿ ಶಕುಂತಳಾ ಪೂವಪ್ಪ ಅವರು ಉಪಸ್ಥಿತರಿದ್ದರು.
ನಿವೃತ್ತ ಸಬ್ ಇನ್ಸ್‌ಪೆಕ್ಟರ್ ರಾಜಾರಾಂ ಕಾರ್ಯಕ್ರಮ ನಿರ್ವಹಿಸಿದರು. ಕೆಂಚಪ್ಪ ವಂದಿಸಿದರು.
…..

ಇತ್ತೀಚಿನ ಸುದ್ದಿ

ಜಾಹೀರಾತು