9:34 AM Wednesday4 - February 2026
ಬ್ರೇಕಿಂಗ್ ನ್ಯೂಸ್
Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ…

ಇತ್ತೀಚಿನ ಸುದ್ದಿ

ನಿಯಮ ಬಾಹಿರವಾಗಿ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳಿಗೆ ಬಿತ್ತು ಬೀಗ ಮುದ್ರೆ.!!

08/05/2021, 15:03

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ(Reporter Karnataka News):ನಿಯಮ ಬಾಹಿರವಾಗಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ 6 ಅಂಗಡಿಗಳ ಮೇಲೆ ಕಂದಾಯ ಹಾಗೂ ಪುರಸಭೆ ಅಧಿಕಾರಿಗಳು ದಾಳಿ ನಡೆಸಿ ಬೀಗ ಮುದ್ರೆ ಹಾಕಿದರು.

ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮಾತನಾಡಿ, ಕೊರೊನಾ ಸಂಕಷ್ಟದಿಂದ ಜನರನ್ನು ಪಾರುಮಾಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ. ಜನತಾ ಕಫ್ರ್ಯೂ ನಿಯಮಗಳನ್ನು ಗಾಳಿಗೆ ತೂರಿ ವ್ಯವಹರಿಸುವ ವ್ಯಾಪಾರಿಗಳು ಹಾಗೂ ಸಾರ್ವಜನಿರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರ್ ರೆಡ್ಡಿ ಮಾತನಾಡಿ, ಕಫ್ರ್ಯೂ ಸಂದರ್ಭದಲ್ಲಿ ಸಮಯ ಪಾಲನೆ ಅತ್ಯಗತ್ಯ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ನಿಯಮ ಬಾಹಿರ. ಅಂಥ ವಸ್ತುಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಗುವುದು. ಪಟ್ಟಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕೋವಿಡ್ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದು ಹೇಳಿದರು.

ಪುರಸಭೆ ಆರೋಗ್ಯ ನಿರೀಕ್ಷಕ ಪೃಥ್ವಿರಾಜ್ ಹಾಗೂ ಪುರಸಭೆ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು