10:15 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ನಿಯಮ ಬಾಹಿರವಾಗಿ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳಿಗೆ ಬಿತ್ತು ಬೀಗ ಮುದ್ರೆ.!!

08/05/2021, 15:03

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ(Reporter Karnataka News):ನಿಯಮ ಬಾಹಿರವಾಗಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ 6 ಅಂಗಡಿಗಳ ಮೇಲೆ ಕಂದಾಯ ಹಾಗೂ ಪುರಸಭೆ ಅಧಿಕಾರಿಗಳು ದಾಳಿ ನಡೆಸಿ ಬೀಗ ಮುದ್ರೆ ಹಾಕಿದರು.

ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮಾತನಾಡಿ, ಕೊರೊನಾ ಸಂಕಷ್ಟದಿಂದ ಜನರನ್ನು ಪಾರುಮಾಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ. ಜನತಾ ಕಫ್ರ್ಯೂ ನಿಯಮಗಳನ್ನು ಗಾಳಿಗೆ ತೂರಿ ವ್ಯವಹರಿಸುವ ವ್ಯಾಪಾರಿಗಳು ಹಾಗೂ ಸಾರ್ವಜನಿರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರ್ ರೆಡ್ಡಿ ಮಾತನಾಡಿ, ಕಫ್ರ್ಯೂ ಸಂದರ್ಭದಲ್ಲಿ ಸಮಯ ಪಾಲನೆ ಅತ್ಯಗತ್ಯ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ನಿಯಮ ಬಾಹಿರ. ಅಂಥ ವಸ್ತುಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಗುವುದು. ಪಟ್ಟಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕೋವಿಡ್ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದು ಹೇಳಿದರು.

ಪುರಸಭೆ ಆರೋಗ್ಯ ನಿರೀಕ್ಷಕ ಪೃಥ್ವಿರಾಜ್ ಹಾಗೂ ಪುರಸಭೆ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು