6:25 PM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ನಿಯಮ ಉಲ್ಲಂಘನೆ; ಇಂಡಿಗೋ, ಸ್ಪೈಸ್​ಜೆಟ್​ ಬಳಿಕ ಏರ್​ ವಿಸ್ತಾರಾಗೂ ಬಿತ್ತು 10 ಲಕ್ಷ ರೂ. ದಂಡ..!

03/06/2022, 11:53

ಹೊಸದಿಲ್ಲಿ(reporterkarnataka.com): ಕೆಲ ದಿನಗಳ ಹಿಂದೆ ಇಂಡಿಗೋ ಹಾಗೂ ಸ್ಪೈಸ್​ಜೆಟ್​ ಏರ್​ಲೈನ್ಸ್​ಗೆ ದಂಡ ವಿಧಿಸಿದ್ದ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ(ಡಿಜಿಸಿಎ) ಇದೀಗ ಏರ್​ ವಿಸ್ತಾರಾಗೂ 10 ಲಕ್ಷ ರೂಪಾಯಿ ದಂಡ ಹಾಕಿದೆ.

ಮಧ್ಯಪ್ರದೇಶದ ಇಂದೋರ್​​ ವಿಮಾನ ನಿಲ್ದಾಣದಲ್ಲಿ ತರಬೇತಿ ಇಲ್ಲದ ಪೈಲಟ್​​ನಿಂದ ಪ್ರಯಾಣಿಕರಿದ್ದ ವಿಮಾನ ಲ್ಯಾಂಡಿಂಗ್ ಮಾಡಿಸಿದ್ದಕ್ಕಾಗಿ ಈ ದಂಡ ವಿಧಿಸಿರುವುದಾಗಿ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಡಿಜಿಸಿಎ ನೀಡಿರುವ ಟೇಕಾಫ್​ ಮತ್ತು ಲ್ಯಾಂಡಿಂಗ್​ ಕ್ಲಿಯರೆನ್ಸ್​ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಏರ್​ಲೈನ್ಸ್​ ಕಂಪನಿಗೆ ದಂಡ ಹಾಕಲಾಗಿದೆ. ಏರ್​​ಲೈನ್ಸ್​ ಕಂಪನಿ ತೆಗೆದುಕೊಂಡಿರುವ ನಿಯಮದಿಂದ ಪ್ರಯಾಣಿಕರ ಜೀವಕ್ಕೆ ಕುತ್ತು ಬರುವ ಸಾಧ್ಯತೆ ಇತ್ತು. ಇದೊಂದು ಗಂಭೀರ ನಿಯಮ ಉಲ್ಲಂಘನೆ ಅಪರಾಧವಾಗಿದೆ ಎಂದಿದೆ.

ಸಿಮ್ಯುಲೇಟರ್​​ನಲ್ಲಿ ಅಗತ್ಯ ತರಬೇತಿ ಪಡೆಯದ ಪೈಲಟ್​​ ವಿಮಾನ ಲ್ಯಾಂಡ್ ಮಾಡಿದ್ದು, ಫರ್ಸ್ಟ್ ಆಫೀಸರ್ ವಿಮಾನವನ್ನು ಲ್ಯಾಂಡ್ ಮಾಡುವುದಕ್ಕೂ ಮುನ್ನ ಸಿಮ್ಯುಲೇಟರ್​​ನಲ್ಲಿ ತರಬೇತಿ ಪಡೆದಿರಬೇಕು. ಈ ರೀತಿ ತರಬೇತಿ ಪಡೆದವರನ್ನು ಲ್ಯಾಂಡ್ ಮಾಡುವುದಕ್ಕೆ ಅನುಮತಿಸುವ ಕ್ಯಾಪ್ಟನ್ ಸಹ ತರಬೇತಿ ಪಡೆದಿರಬೇಕು ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ 30ರಂದು ಈ ಘಟನೆ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು