8:28 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ನಿಯಮ ಉಲ್ಲಂಘನೆ; ಇಂಡಿಗೋ, ಸ್ಪೈಸ್​ಜೆಟ್​ ಬಳಿಕ ಏರ್​ ವಿಸ್ತಾರಾಗೂ ಬಿತ್ತು 10 ಲಕ್ಷ ರೂ. ದಂಡ..!

03/06/2022, 11:53

ಹೊಸದಿಲ್ಲಿ(reporterkarnataka.com): ಕೆಲ ದಿನಗಳ ಹಿಂದೆ ಇಂಡಿಗೋ ಹಾಗೂ ಸ್ಪೈಸ್​ಜೆಟ್​ ಏರ್​ಲೈನ್ಸ್​ಗೆ ದಂಡ ವಿಧಿಸಿದ್ದ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ(ಡಿಜಿಸಿಎ) ಇದೀಗ ಏರ್​ ವಿಸ್ತಾರಾಗೂ 10 ಲಕ್ಷ ರೂಪಾಯಿ ದಂಡ ಹಾಕಿದೆ.

ಮಧ್ಯಪ್ರದೇಶದ ಇಂದೋರ್​​ ವಿಮಾನ ನಿಲ್ದಾಣದಲ್ಲಿ ತರಬೇತಿ ಇಲ್ಲದ ಪೈಲಟ್​​ನಿಂದ ಪ್ರಯಾಣಿಕರಿದ್ದ ವಿಮಾನ ಲ್ಯಾಂಡಿಂಗ್ ಮಾಡಿಸಿದ್ದಕ್ಕಾಗಿ ಈ ದಂಡ ವಿಧಿಸಿರುವುದಾಗಿ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಡಿಜಿಸಿಎ ನೀಡಿರುವ ಟೇಕಾಫ್​ ಮತ್ತು ಲ್ಯಾಂಡಿಂಗ್​ ಕ್ಲಿಯರೆನ್ಸ್​ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಏರ್​ಲೈನ್ಸ್​ ಕಂಪನಿಗೆ ದಂಡ ಹಾಕಲಾಗಿದೆ. ಏರ್​​ಲೈನ್ಸ್​ ಕಂಪನಿ ತೆಗೆದುಕೊಂಡಿರುವ ನಿಯಮದಿಂದ ಪ್ರಯಾಣಿಕರ ಜೀವಕ್ಕೆ ಕುತ್ತು ಬರುವ ಸಾಧ್ಯತೆ ಇತ್ತು. ಇದೊಂದು ಗಂಭೀರ ನಿಯಮ ಉಲ್ಲಂಘನೆ ಅಪರಾಧವಾಗಿದೆ ಎಂದಿದೆ.

ಸಿಮ್ಯುಲೇಟರ್​​ನಲ್ಲಿ ಅಗತ್ಯ ತರಬೇತಿ ಪಡೆಯದ ಪೈಲಟ್​​ ವಿಮಾನ ಲ್ಯಾಂಡ್ ಮಾಡಿದ್ದು, ಫರ್ಸ್ಟ್ ಆಫೀಸರ್ ವಿಮಾನವನ್ನು ಲ್ಯಾಂಡ್ ಮಾಡುವುದಕ್ಕೂ ಮುನ್ನ ಸಿಮ್ಯುಲೇಟರ್​​ನಲ್ಲಿ ತರಬೇತಿ ಪಡೆದಿರಬೇಕು. ಈ ರೀತಿ ತರಬೇತಿ ಪಡೆದವರನ್ನು ಲ್ಯಾಂಡ್ ಮಾಡುವುದಕ್ಕೆ ಅನುಮತಿಸುವ ಕ್ಯಾಪ್ಟನ್ ಸಹ ತರಬೇತಿ ಪಡೆದಿರಬೇಕು ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ 30ರಂದು ಈ ಘಟನೆ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು