10:12 PM Wednesday27 - May 2026
ಬ್ರೇಕಿಂಗ್ ನ್ಯೂಸ್
Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ನಿಯಮ ಉಲ್ಲಂಘನೆ; ಇಂಡಿಗೋ, ಸ್ಪೈಸ್​ಜೆಟ್​ ಬಳಿಕ ಏರ್​ ವಿಸ್ತಾರಾಗೂ ಬಿತ್ತು 10 ಲಕ್ಷ ರೂ. ದಂಡ..!

03/06/2022, 11:53

ಹೊಸದಿಲ್ಲಿ(reporterkarnataka.com): ಕೆಲ ದಿನಗಳ ಹಿಂದೆ ಇಂಡಿಗೋ ಹಾಗೂ ಸ್ಪೈಸ್​ಜೆಟ್​ ಏರ್​ಲೈನ್ಸ್​ಗೆ ದಂಡ ವಿಧಿಸಿದ್ದ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ(ಡಿಜಿಸಿಎ) ಇದೀಗ ಏರ್​ ವಿಸ್ತಾರಾಗೂ 10 ಲಕ್ಷ ರೂಪಾಯಿ ದಂಡ ಹಾಕಿದೆ.

ಮಧ್ಯಪ್ರದೇಶದ ಇಂದೋರ್​​ ವಿಮಾನ ನಿಲ್ದಾಣದಲ್ಲಿ ತರಬೇತಿ ಇಲ್ಲದ ಪೈಲಟ್​​ನಿಂದ ಪ್ರಯಾಣಿಕರಿದ್ದ ವಿಮಾನ ಲ್ಯಾಂಡಿಂಗ್ ಮಾಡಿಸಿದ್ದಕ್ಕಾಗಿ ಈ ದಂಡ ವಿಧಿಸಿರುವುದಾಗಿ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಡಿಜಿಸಿಎ ನೀಡಿರುವ ಟೇಕಾಫ್​ ಮತ್ತು ಲ್ಯಾಂಡಿಂಗ್​ ಕ್ಲಿಯರೆನ್ಸ್​ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಏರ್​ಲೈನ್ಸ್​ ಕಂಪನಿಗೆ ದಂಡ ಹಾಕಲಾಗಿದೆ. ಏರ್​​ಲೈನ್ಸ್​ ಕಂಪನಿ ತೆಗೆದುಕೊಂಡಿರುವ ನಿಯಮದಿಂದ ಪ್ರಯಾಣಿಕರ ಜೀವಕ್ಕೆ ಕುತ್ತು ಬರುವ ಸಾಧ್ಯತೆ ಇತ್ತು. ಇದೊಂದು ಗಂಭೀರ ನಿಯಮ ಉಲ್ಲಂಘನೆ ಅಪರಾಧವಾಗಿದೆ ಎಂದಿದೆ.

ಸಿಮ್ಯುಲೇಟರ್​​ನಲ್ಲಿ ಅಗತ್ಯ ತರಬೇತಿ ಪಡೆಯದ ಪೈಲಟ್​​ ವಿಮಾನ ಲ್ಯಾಂಡ್ ಮಾಡಿದ್ದು, ಫರ್ಸ್ಟ್ ಆಫೀಸರ್ ವಿಮಾನವನ್ನು ಲ್ಯಾಂಡ್ ಮಾಡುವುದಕ್ಕೂ ಮುನ್ನ ಸಿಮ್ಯುಲೇಟರ್​​ನಲ್ಲಿ ತರಬೇತಿ ಪಡೆದಿರಬೇಕು. ಈ ರೀತಿ ತರಬೇತಿ ಪಡೆದವರನ್ನು ಲ್ಯಾಂಡ್ ಮಾಡುವುದಕ್ಕೆ ಅನುಮತಿಸುವ ಕ್ಯಾಪ್ಟನ್ ಸಹ ತರಬೇತಿ ಪಡೆದಿರಬೇಕು ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ 30ರಂದು ಈ ಘಟನೆ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು