10:33 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ರಾಜ್ಯದಲ್ಲೇ ಮಂಗಳೂರನ್ನು 2ನೇ ನಗರವಾಗಿ ಅಭಿವೃದ್ಧಿಪಡಿಸಲಾಗುವುದು: ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ

20/04/2023, 18:14

ಮಂಗಳೂರು(reporterkarnataka.com): ಮಂಗಳೂರು ನಗರವನ್ನು ರಾಜ್ಯದಲ್ಲಿಯೇ ಎರಡನೇ ನಗರವಾಗಿ ಅಭಿವೃದ್ದಿಪಡಿಸಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಹೇಳಿದರು.
ನಗರದ ಲಾಲ್ ಬಾಗ್ ನ ಪಾಲಿಕೆ ಕಚೇರಿಯಲ್ಲಿರುವ ಚುನಾವಣಾಧಿಕಾರಿ ಕಚೇರಿ ಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದ ಬಳಿಕ ಅವರು ಮಾಧ್ಯಮದ ಜತೆ ಮಾತನಾಡಿದರು.
ಮಂಗಳೂರಿನ ಅಭಿವೃದ್ಧಿಗೆ ನೀವೆಲ್ಲರೂ ಕೈಜೋಡಿಸಬೇಕು. ನಾವೆಲ್ಲರು ಸೇರಿ ಮಂಗಳೂರನ್ನು ರಾಜ್ಯದ ಎರಡನೇ ನಗರವಾಗಿ ಅಭಿವೃದ್ಧಿಪಡಿಸೋಣ. ಮಂಗಳೂರಿನಲ್ಲಿ ಉದ್ಯೋಗಗಳು ದೊರಕಬೇಕು. ಮಂಗಳೂರಿನ ಜನತೆ ಸೌಹಾರ್ದತೆಯಿಂದ ಅಣ್ಣ-ತಮ್ಮಂದಿರ ತರಹ ಬದುಕಬೇಕು. ನಮ್ಮ ಸಂವಿಧಾನದ ಆಶಯಗಳೇನಿದೆ ಅದರ ಪ್ರಕಾರ ಜಾತಿ-ಮತ ಬೇಧವಿಲ್ಲದೆ. ಎಲ್ಲ ಧರ್ಮಗಳ ಸಮಾನವಾಗಿ ಕಂಡು, ಎಲ್ಲರನ್ನು ಪ್ರೀತಿಸಿ ಸಾಮರಸ್ಯದ ಬದುಕನ್ನು ಕಾಣಬೇಕು. ಅದೇ ನಮ್ಮ ಗುರಿ. ನಮ್ಮಲ್ಲಿ ಬಂಡವಾಳ ಹೂಡಿಕೆಯಾಗಿ, ಉದ್ಯೋಗ ಸೃಷ್ಟಿಯಾಗಿ ನಮ್ಮ ಯುವಕ, ಯುವತಿಯರಿಗೆ ಮಂಗಳೂರಿನಲ್ಲೇ ಉದ್ಯೋಗ ದೊರಕುವ ವಾತಾವರಣ ನಿರ್ಮಾಣವಾಗಬೇಕು. ಯಾವುದೇ ಜಾತಿ- ಮತ- ಧರ್ಮದ ಬೇಧವಿಲ್ಲದೆ ಉತ್ತಮ ಬಾಳ್ವೆ ಮಾಡುವ ವಾತಾವರಣ ನಿರ್ಮಾಣವಾಗಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು