1:17 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ರಾಜ್ಯದಲ್ಲೇ ಮಂಗಳೂರನ್ನು 2ನೇ ನಗರವಾಗಿ ಅಭಿವೃದ್ಧಿಪಡಿಸಲಾಗುವುದು: ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ

20/04/2023, 18:14

ಮಂಗಳೂರು(reporterkarnataka.com): ಮಂಗಳೂರು ನಗರವನ್ನು ರಾಜ್ಯದಲ್ಲಿಯೇ ಎರಡನೇ ನಗರವಾಗಿ ಅಭಿವೃದ್ದಿಪಡಿಸಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಹೇಳಿದರು.
ನಗರದ ಲಾಲ್ ಬಾಗ್ ನ ಪಾಲಿಕೆ ಕಚೇರಿಯಲ್ಲಿರುವ ಚುನಾವಣಾಧಿಕಾರಿ ಕಚೇರಿ ಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದ ಬಳಿಕ ಅವರು ಮಾಧ್ಯಮದ ಜತೆ ಮಾತನಾಡಿದರು.
ಮಂಗಳೂರಿನ ಅಭಿವೃದ್ಧಿಗೆ ನೀವೆಲ್ಲರೂ ಕೈಜೋಡಿಸಬೇಕು. ನಾವೆಲ್ಲರು ಸೇರಿ ಮಂಗಳೂರನ್ನು ರಾಜ್ಯದ ಎರಡನೇ ನಗರವಾಗಿ ಅಭಿವೃದ್ಧಿಪಡಿಸೋಣ. ಮಂಗಳೂರಿನಲ್ಲಿ ಉದ್ಯೋಗಗಳು ದೊರಕಬೇಕು. ಮಂಗಳೂರಿನ ಜನತೆ ಸೌಹಾರ್ದತೆಯಿಂದ ಅಣ್ಣ-ತಮ್ಮಂದಿರ ತರಹ ಬದುಕಬೇಕು. ನಮ್ಮ ಸಂವಿಧಾನದ ಆಶಯಗಳೇನಿದೆ ಅದರ ಪ್ರಕಾರ ಜಾತಿ-ಮತ ಬೇಧವಿಲ್ಲದೆ. ಎಲ್ಲ ಧರ್ಮಗಳ ಸಮಾನವಾಗಿ ಕಂಡು, ಎಲ್ಲರನ್ನು ಪ್ರೀತಿಸಿ ಸಾಮರಸ್ಯದ ಬದುಕನ್ನು ಕಾಣಬೇಕು. ಅದೇ ನಮ್ಮ ಗುರಿ. ನಮ್ಮಲ್ಲಿ ಬಂಡವಾಳ ಹೂಡಿಕೆಯಾಗಿ, ಉದ್ಯೋಗ ಸೃಷ್ಟಿಯಾಗಿ ನಮ್ಮ ಯುವಕ, ಯುವತಿಯರಿಗೆ ಮಂಗಳೂರಿನಲ್ಲೇ ಉದ್ಯೋಗ ದೊರಕುವ ವಾತಾವರಣ ನಿರ್ಮಾಣವಾಗಬೇಕು. ಯಾವುದೇ ಜಾತಿ- ಮತ- ಧರ್ಮದ ಬೇಧವಿಲ್ಲದೆ ಉತ್ತಮ ಬಾಳ್ವೆ ಮಾಡುವ ವಾತಾವರಣ ನಿರ್ಮಾಣವಾಗಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು