2:23 AM Thursday19 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ಪದವಿ ತರಗತಿ ಆರಂಭಿಸದಂತೆ ಜಿಲ್ಲಾಧಿಕಾರಿ ಸೂಚನೆ

26/08/2021, 20:37

ಮಂಗಳೂರು(reporterkarnatka.com)

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್‍ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ನಿರ್ದೇಶನ ನೀಡಿದ್ದಾರೆ.

ಕೋವಿಡ್ ಸೋಂಕು ಹಿನ್ನಲೆಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ಆ.26ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಜಿಲ್ಲೆಯ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಸೆಪ್ಟೆಂಬರ್ 15ರೊಳಗೆ ಕಡಿಮೆಯಾದಲ್ಲಿ ಮತ್ತೊಮ್ಮೆ ಸಂಬಂಧಪಟ್ಟ ಕಾಲೇಜು ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಭೌತಿಕ ತರಗತಿಗಳನ್ನು ಪ್ರಾರಂಭಿಸಲು ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು, ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಗತಿಗಳನ್ನು ಬ್ಯಾಚ್‍ವೈಸ್ ಮೂಲಕ ಕೋವಿಡ್ ಮಾರ್ಗಸೂಚಿಗಳ ಅನುಸಾರವೇ ನಡೆಸಬೇಕು, ವಿಜ್ಞಾನ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ವಿಭಾಗಗಳ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕವೇ ತರಗತಿಗಳನ್ನು ನಡೆಸುವಂತೆ ಸೂಚನೆ ನೀಡಿದ್ದಾರೆ.

ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್ ನಿರೋಧಕ ಲಸಿಕೆ ಪಡೆದಿರಬೇಕು, ಲಸಿಕೆ ಪಡೆಯದ ಸಿಬ್ಬಂದಿಗಳು ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳದ ಮಾಹಿತಿಯನ್ನು ಕಾಲೇಜು ಶಿಕ್ಷಣಾಧಿಕಾರಿಗಳು ನೀಡಬೇಕು, ನೆಟ್‍ವರ್ಕ್ ಸಮಸ್ಯೆಯಿಂದ ಗ್ರಾಮೀಣ ಭಾಗದ ಕೆಲವು ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳಿಗೆ ಹಾಜರಾಗುವುದು ಸಮಸ್ಯೆಯಾಗಿದೆ, ಜಿಲ್ಲಾಡಳಿತದಿಂದ ಪರ್ಯಾಯ ಮಾರ್ಗ ಹುಡುಕಿ ಅಂತಹ ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಹಾಜರಾಗುವ ವ್ಯವಸ್ಥೆ ಮಾಡಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಡಾ. ಪ್ರಜ್ಞಾ ಅಮ್ಮೆಂಬಳ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಕಿಶೋರ್.ಕೆ, ಕಾಲೇಜು ಶಿಕ್ಷಣ ವಿಷೇಶಾಧಿಕಾರಿ ಜಯಕರ ಭಂಡಾರಿ, ನಿಟ್ಟೆ ವಿಶ್ವವಿದ್ಯಾನಿಲಯದ ನೋಡಲ್ ಅಧಿಕಾರಿ ಡಾ. ದಾನೇಶ್ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು