6:09 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪ ಪರಿಹಾರವೇ ಬಂದಿಲ್ಲ: ಶಾಸಕ ವೇದವ್ಯಾಸ ಕಾಮತ್

05/07/2025, 21:44

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದಾಗಿರುವ ಹಾನಿ, ಕೈಗೊಂಡ ಪರಿಹಾರ ಕ್ರಮ, ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ಬಾರಿಯ ಪ್ರಕೃತಿ ವಿಕೋಪದಿಂದಾಗಿ ನಗರದ ಹಲವೆಡೆ ರಸ್ತೆ, ಚರಂಡಿ, ರಾಜ ಕಾಲುವೆ, ತಡೆಗೋಡೆಗಳಿಗೆ ವಿಪರೀತ ಹಾನಿಯಾಗಿದೆ. ಕಾನೂನಾತ್ಮಕವಾಗಿ ತಡೆಗೋಡೆಗೆ ಪರಿಹಾರ ಒದಗಿಸಲು ಸಾಧ್ಯವಿಲ್ಲದಿದ್ದರೂ, ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 25 ರಿಂದ 50 ಕೋಟಿವರೆಗೂ ಅನುದಾನವನ್ನು ತಂದು ನಗರದಲ್ಲಿ ಪರಿಹಾರ ಕಾರ್ಯ ನಡೆಸಲಾಗಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಳೆದ ಎರಡು ವರ್ಷಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ ವಿಶೇಷ ಅನುದಾನವನ್ನೇ (ಎಸ್.ಎಫ್.ಸಿ) ನೀಡಿಲ್ಲ. ಅಲ್ಲದೇ ಈ ಹಿಂದಿನ ಮಳೆ ಹಾನಿಯ ಪರಿಹಾರ ಧನವೂ ಬಂದಿಲ್ಲ. ಅದರ ಜೊತೆಗೆ ಈ ಬಾರಿಯ ಪರಿಹಾರದ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಲಿದ್ದು ಅದೂ ಸಹ ಬಾಕಿಯಾದರೆ ಕ್ಷೇತ್ರದ ಜನತೆ ತೀವ್ರ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದರು.
ಇದೀಗ ರಾಜ್ಯ ಸರ್ಕಾರ ಮನೆಗಳಿಗೆ ಅಲ್ಪಮೊತ್ತದ ಪರಿಹಾರ ನೀಡುತ್ತಿದ್ದರೂ ರಸ್ತೆ, ಚರಂಡಿ, ರಾಜಕಾಲುವೆ, ತಡೆಗೋಡೆಗಳಿಗೆ ಉಂಟಾಗಿರುವ ತೀವ್ರ ಹಾನಿಯ ಬಗ್ಗೆ ಯಾವುದೇ ಕ್ರಮವಹಿಸಿಲ್ಲ. ಹಾಗಾಗಿ ಕಳೆದ ಎರಡು ವರ್ಷಗಳಲ್ಲಿ ಆಗಿರುವ ಹಾನಿ ಹಾಗೂ ಮುಂದೆ ಅದನ್ನು ತಡೆಗಟ್ಟುವ ಬಗ್ಗೆ ಪಾಲಿಕೆ ಮತ್ತು ಕಂದಾಯ ಅಧಿಕಾರಿಗಳು ಒಂದು ವಾರದೊಳಗೆ ಜಂಟಿಯಾಗಿ ವರದಿ ಸಿದ್ದಪಡಿಸುವಂತೆ ಸೂಚನೆ ನೀಡಿದ್ದೇನೆ. ನಂತರ ಅದನ್ನು ರಾಜ್ಯ ಕಾಂಗ್ರೆಸ್ ಸರ್ಕಾರದ ಗಮನಕ್ಕೆ ತಂದು ಹೆಚ್ಚಿನ ಅನುದಾನಕ್ಕಾಗಿ ಪ್ರಯತ್ನಿಸಲಾಗುವುದು. ಮುಖ್ಯಮಂತ್ರಿಗಳು ನಮ್ಮ ಜಿಲ್ಲೆಗೆ ಬಂದಿದ್ದಾಗ 50 ಕೋಟಿ ಅನುದಾನದ ಬಗ್ಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಮಳೆಗಾಲ ಮುಗಿಯುತ್ತಿದ್ದಂತೆ ಸರ್ಕಾರದ ಅನುದಾನ ಹೊಂದಿಸಿಕೊಂಡು ಎಲ್ಲಾ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಯಪಾಲಕ ಇಂಜಿನಿಯರ್ ನರೇಶ್ ಶೆಣೈ, ತಾಲೂಕು ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು