11:09 PM Tuesday29 - July 2025
ಬ್ರೇಕಿಂಗ್ ನ್ಯೂಸ್
Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ…

ಇತ್ತೀಚಿನ ಸುದ್ದಿ

ನೋಡುಗರ ಕೌತುಕಕ್ಕೆ ಕಾರಣವಾಗಿ ವಿಚಿತ್ರ ಅಣಬೆ!: ಪ್ರಕೃತಿ ವೈಚಿತ್ರ್ಯದ ಸೊಬಗು ಇಲ್ಲಿದೆ ನೋಡಿ!

14/10/2023, 12:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಸಮೀಪದ ಗಿರೀಶ್ ಎಂಬುವರ ತೋಟದಲ್ಲಿ ವಿಚಿತ್ರ ಅಣಬೆವೊಂದು ಹುಟ್ಟಿದ್ದು ನೋಡುಗರ ಕೌತುಕಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಅಣಬೆಗಳು ಹುಟ್ಟೋದೇ ರಾತ್ರಿ ವೇಳೆ. ರಾತ್ರಿ ಹುಟ್ಟಿ ಸಂಜೆ ವೇಳೆಗೆ ಬಾಡಿ ಹೋಗುತ್ತೆ. ಆದ್ರೆ, ನಿನ್ನೆ ಸಂಜೆ ಇಲ್ಲದ ಈ ವಿಚಿತ್ರ ಅಣಬೆ ಬೆಳಗಾಗುವಷ್ಟರಲ್ಲಿ ವಿಚಿತ್ರವಾಗಿ ಬೆಳೆದಿದೆ. ಈ ರೀತಿಯ ಅಣಬೆಗಳು ಬೆಳೆಯುತ್ತೆ. ಆದರೆ, ತುಂಬಾ ವಿರಳ. ಇದನ್ನ ಮೆಟ್ಟಿಲು ಅಣಬೆ ಅಥವ ಬಲೆ ಅಣಬೆ ಅಂತಾನೂ ಕರೆಯುತ್ತಾರೆ. ಗುಡುಗು-ಸಿಡಿಲು-ಮಿಂಚು ಬರುವ ವೇಳೆ ಈ ರೀತಿಯ ಅಣಬೆಗಳು ಹುಟ್ಟುತ್ತೆ ಅನ್ನೋದು ಹಿರಿಯ ನಂಬಿಕೆ. ನಿನ್ನೆ ಸಂಜೆ ಚಿಕ್ಕಮಗಳೂರು

ತಾಲೂಕಿನ ಮಲೆನಾಡು ಭಾಗದಲ್ಲಿ ಸಮೃದ್ಧ ಮಳೆಯಾಗಿದೆ.

ಮಲ್ಲಂದೂರು ಭಾಗದಲ್ಲಿ ಧಾರಾಕಾರ ಮಳೆ ಸುರಿದಿದೆ. ಗುಡುಗು-ಮಿಂಚು-ಸಿಡಿಲು ಕೂಡ ಇತ್ತು. ಹಾಗಾಗಿ, ನಿನ್ನೆ ಸಂಜೆ ಇಲ್ಲದ ಈ ಅಣಬೆ ಬೆಳಗಾಗುವಷ್ಟರಲ್ಲಿ ಈ ರೀತಿ ವಿಚಿತ್ರವಾಗಿ ಬೆಳೆದಿದ್ದು ನೋಡುಗುರ ಪ್ರಕೃತಿಯಲ್ಲಿನ ವೈಚಿತ್ರ್ಯದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಆದರೆ, ಇತ್ತೀಚಿನ ಹಲವು ವರ್ಷಗಳಲ್ಲಿ ಈ ರೀತಿಯ ಇಷ್ಟು ದೊಡ್ಡ ಬಲೆ ಅಣಬೆ ಬೆಳೆದಿರಲಿಲ್ಲ. ಈ ಬಾರಿ ಮಳೆಗಾಲದಲ್ಲಿ ಸಮರ್ಪಕ ಮಳೆ ಆಗಿಲ್ಲ. ಈಗ ಧಾರಾಕಾರ ಮಳೆ ಸುರಿಯುತ್ತಿದೆ. ಈಗ ಬೆಳೆದಿರುವುದು ಪ್ರಕೃತಿಯ ಅಸಮಾತೋಲನದಿಂದಲೇ ಈ ರೀತಿಯ ಬಲೆ ಅಣಬೆ ಹುಟ್ಟಿದೆ ಅನ್ನೋದು ಸ್ಥಳಿಯರು ಮಾತು.

ಇತ್ತೀಚಿನ ಸುದ್ದಿ

ಜಾಹೀರಾತು