10:46 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ನೋಡುಗರ ಕೌತುಕಕ್ಕೆ ಕಾರಣವಾಗಿ ವಿಚಿತ್ರ ಅಣಬೆ!: ಪ್ರಕೃತಿ ವೈಚಿತ್ರ್ಯದ ಸೊಬಗು ಇಲ್ಲಿದೆ ನೋಡಿ!

14/10/2023, 12:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಸಮೀಪದ ಗಿರೀಶ್ ಎಂಬುವರ ತೋಟದಲ್ಲಿ ವಿಚಿತ್ರ ಅಣಬೆವೊಂದು ಹುಟ್ಟಿದ್ದು ನೋಡುಗರ ಕೌತುಕಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಅಣಬೆಗಳು ಹುಟ್ಟೋದೇ ರಾತ್ರಿ ವೇಳೆ. ರಾತ್ರಿ ಹುಟ್ಟಿ ಸಂಜೆ ವೇಳೆಗೆ ಬಾಡಿ ಹೋಗುತ್ತೆ. ಆದ್ರೆ, ನಿನ್ನೆ ಸಂಜೆ ಇಲ್ಲದ ಈ ವಿಚಿತ್ರ ಅಣಬೆ ಬೆಳಗಾಗುವಷ್ಟರಲ್ಲಿ ವಿಚಿತ್ರವಾಗಿ ಬೆಳೆದಿದೆ. ಈ ರೀತಿಯ ಅಣಬೆಗಳು ಬೆಳೆಯುತ್ತೆ. ಆದರೆ, ತುಂಬಾ ವಿರಳ. ಇದನ್ನ ಮೆಟ್ಟಿಲು ಅಣಬೆ ಅಥವ ಬಲೆ ಅಣಬೆ ಅಂತಾನೂ ಕರೆಯುತ್ತಾರೆ. ಗುಡುಗು-ಸಿಡಿಲು-ಮಿಂಚು ಬರುವ ವೇಳೆ ಈ ರೀತಿಯ ಅಣಬೆಗಳು ಹುಟ್ಟುತ್ತೆ ಅನ್ನೋದು ಹಿರಿಯ ನಂಬಿಕೆ. ನಿನ್ನೆ ಸಂಜೆ ಚಿಕ್ಕಮಗಳೂರು

ತಾಲೂಕಿನ ಮಲೆನಾಡು ಭಾಗದಲ್ಲಿ ಸಮೃದ್ಧ ಮಳೆಯಾಗಿದೆ.

ಮಲ್ಲಂದೂರು ಭಾಗದಲ್ಲಿ ಧಾರಾಕಾರ ಮಳೆ ಸುರಿದಿದೆ. ಗುಡುಗು-ಮಿಂಚು-ಸಿಡಿಲು ಕೂಡ ಇತ್ತು. ಹಾಗಾಗಿ, ನಿನ್ನೆ ಸಂಜೆ ಇಲ್ಲದ ಈ ಅಣಬೆ ಬೆಳಗಾಗುವಷ್ಟರಲ್ಲಿ ಈ ರೀತಿ ವಿಚಿತ್ರವಾಗಿ ಬೆಳೆದಿದ್ದು ನೋಡುಗುರ ಪ್ರಕೃತಿಯಲ್ಲಿನ ವೈಚಿತ್ರ್ಯದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಆದರೆ, ಇತ್ತೀಚಿನ ಹಲವು ವರ್ಷಗಳಲ್ಲಿ ಈ ರೀತಿಯ ಇಷ್ಟು ದೊಡ್ಡ ಬಲೆ ಅಣಬೆ ಬೆಳೆದಿರಲಿಲ್ಲ. ಈ ಬಾರಿ ಮಳೆಗಾಲದಲ್ಲಿ ಸಮರ್ಪಕ ಮಳೆ ಆಗಿಲ್ಲ. ಈಗ ಧಾರಾಕಾರ ಮಳೆ ಸುರಿಯುತ್ತಿದೆ. ಈಗ ಬೆಳೆದಿರುವುದು ಪ್ರಕೃತಿಯ ಅಸಮಾತೋಲನದಿಂದಲೇ ಈ ರೀತಿಯ ಬಲೆ ಅಣಬೆ ಹುಟ್ಟಿದೆ ಅನ್ನೋದು ಸ್ಥಳಿಯರು ಮಾತು.

ಇತ್ತೀಚಿನ ಸುದ್ದಿ

ಜಾಹೀರಾತು