10:42 PM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ನೋಡುಗರ ಕೌತುಕಕ್ಕೆ ಕಾರಣವಾಗಿ ವಿಚಿತ್ರ ಅಣಬೆ!: ಪ್ರಕೃತಿ ವೈಚಿತ್ರ್ಯದ ಸೊಬಗು ಇಲ್ಲಿದೆ ನೋಡಿ!

14/10/2023, 12:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಸಮೀಪದ ಗಿರೀಶ್ ಎಂಬುವರ ತೋಟದಲ್ಲಿ ವಿಚಿತ್ರ ಅಣಬೆವೊಂದು ಹುಟ್ಟಿದ್ದು ನೋಡುಗರ ಕೌತುಕಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಅಣಬೆಗಳು ಹುಟ್ಟೋದೇ ರಾತ್ರಿ ವೇಳೆ. ರಾತ್ರಿ ಹುಟ್ಟಿ ಸಂಜೆ ವೇಳೆಗೆ ಬಾಡಿ ಹೋಗುತ್ತೆ. ಆದ್ರೆ, ನಿನ್ನೆ ಸಂಜೆ ಇಲ್ಲದ ಈ ವಿಚಿತ್ರ ಅಣಬೆ ಬೆಳಗಾಗುವಷ್ಟರಲ್ಲಿ ವಿಚಿತ್ರವಾಗಿ ಬೆಳೆದಿದೆ. ಈ ರೀತಿಯ ಅಣಬೆಗಳು ಬೆಳೆಯುತ್ತೆ. ಆದರೆ, ತುಂಬಾ ವಿರಳ. ಇದನ್ನ ಮೆಟ್ಟಿಲು ಅಣಬೆ ಅಥವ ಬಲೆ ಅಣಬೆ ಅಂತಾನೂ ಕರೆಯುತ್ತಾರೆ. ಗುಡುಗು-ಸಿಡಿಲು-ಮಿಂಚು ಬರುವ ವೇಳೆ ಈ ರೀತಿಯ ಅಣಬೆಗಳು ಹುಟ್ಟುತ್ತೆ ಅನ್ನೋದು ಹಿರಿಯ ನಂಬಿಕೆ. ನಿನ್ನೆ ಸಂಜೆ ಚಿಕ್ಕಮಗಳೂರು

ತಾಲೂಕಿನ ಮಲೆನಾಡು ಭಾಗದಲ್ಲಿ ಸಮೃದ್ಧ ಮಳೆಯಾಗಿದೆ.

ಮಲ್ಲಂದೂರು ಭಾಗದಲ್ಲಿ ಧಾರಾಕಾರ ಮಳೆ ಸುರಿದಿದೆ. ಗುಡುಗು-ಮಿಂಚು-ಸಿಡಿಲು ಕೂಡ ಇತ್ತು. ಹಾಗಾಗಿ, ನಿನ್ನೆ ಸಂಜೆ ಇಲ್ಲದ ಈ ಅಣಬೆ ಬೆಳಗಾಗುವಷ್ಟರಲ್ಲಿ ಈ ರೀತಿ ವಿಚಿತ್ರವಾಗಿ ಬೆಳೆದಿದ್ದು ನೋಡುಗುರ ಪ್ರಕೃತಿಯಲ್ಲಿನ ವೈಚಿತ್ರ್ಯದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಆದರೆ, ಇತ್ತೀಚಿನ ಹಲವು ವರ್ಷಗಳಲ್ಲಿ ಈ ರೀತಿಯ ಇಷ್ಟು ದೊಡ್ಡ ಬಲೆ ಅಣಬೆ ಬೆಳೆದಿರಲಿಲ್ಲ. ಈ ಬಾರಿ ಮಳೆಗಾಲದಲ್ಲಿ ಸಮರ್ಪಕ ಮಳೆ ಆಗಿಲ್ಲ. ಈಗ ಧಾರಾಕಾರ ಮಳೆ ಸುರಿಯುತ್ತಿದೆ. ಈಗ ಬೆಳೆದಿರುವುದು ಪ್ರಕೃತಿಯ ಅಸಮಾತೋಲನದಿಂದಲೇ ಈ ರೀತಿಯ ಬಲೆ ಅಣಬೆ ಹುಟ್ಟಿದೆ ಅನ್ನೋದು ಸ್ಥಳಿಯರು ಮಾತು.

ಇತ್ತೀಚಿನ ಸುದ್ದಿ

ಜಾಹೀರಾತು