5:21 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ನೂತನ ಸಂಪುಟ: ಕಾರ್ಕಳದ ಸುನಿಲ್, ಹಾಸನದ ಪ್ರೀತಂ ಗೌಡ ಸೇರಿದಂತೆ 12 ಹೊಸ ಮುಖ?: ಹಾಗಾದರೆ ಹಳೆಬರಲ್ಲಿ ಯಾರಿಗೆಲ್ಲ ಕೊಕ್? 

27/07/2021, 07:54

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು
info.reporterkarnataka@gmail.com

ಯಡಿಯೂರಪ್ಪ ರಾಜೀನಾಮೆ ಬಳಿಕ ಹೊಸ ಮುಖ್ಯಮಂತ್ರಿ ಹಾಗೂ ಸಂಪುಟದ ಕುರಿತು ಚರ್ಚೆ ಆರಂಭವಾಗಿದೆ. ಸಿಎಂ ಪಟ್ಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಆರಂಭಗೊಂಡು ಮುರುಗೇಶ್ ನಿರಾಣಿ ವರೆಗೆ ಹೆಸರು ಕೇಳಿಬರುತ್ತಿದೆ. ಜತೆಗೆ ಹೊಸ ಸಂಪುಟದಲ್ಲಿ ಹಿಂದಿನ ಸಂಪುಟದಲ್ಲಿದ್ದ ಹಲವರಿಗೆ ಕೊಕ್ ನೀಡುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಯಡಿಯೂರಪ್ಪ ಸಂಪುಟದಲ್ಲಿದ್ದ ಸಚಿವರುಗಳ ಪೈಕಿ ಡಜನಿಗೂ ಅಧಿಕ ಮಂದಿಯನ್ನು ಕೈಬಿಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ಕೇಂದ್ರ ಸಂಪುಟದಲ್ಲಿ 

ಮಾಡಿದ ಮೇಜರ್ ಸರ್ಜರಿಯಂತೆ ರಾಜ್ಯದಲ್ಲಿಯೂ ಮಾಡಲಾಗುತ್ತದೆ. ಕೇಂದ್ರದಲ್ಲಿ

ಹೊಸ ಮುಖಗಳಿಗೆ ಅವಕಾಶ ನೀಡಿದಂತೆ ರಾಜ್ಯದಲ್ಲಿಯೂ ಭಾರಿ ಬದಲಾವಣೆಗಳಾಗಲಿವ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಕೈಬಿಡುವ ಸಚಿವರುಗಳ ಪಟ್ಟಿಯಲ್ಲಿ ಶಶಿಕಲಾ ಜೊಲ್ಲೆ ಮೊದಲ ಸ್ಥಾನದಲ್ಲಿದ್ದಾರೆ. ಹಾಗೆ ಸಚಿವರಾದ ಸುರೇಶ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಪ್ರಭು ಚೌವ್ಹಾಣ್, ಸಿ.ಸಿ.ಪಾಟೀಲ್, ಶ್ರೀಮಂತ್ ಪಾಟೀಲ್, ಬಿ.ಸಿ.ಪಾಟೀಲ್, ಶಿವರಾಮ್ ಹೆಬ್ಬಾರ್, ಕೆ.ಸಿ.ನಾರಾಯಣ ಗೌಡ ಮೊದಲಾದವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ ಎನ್ನಲಾಗಿದೆ. ಸುರೇಶ್ ಕುಮಾರ್ ಹಾಗೂ ಕೋಟಾ ಶ್ರೀನಿವಾಸ ಪೂಜಾರಿ ಅವರು ಕೊಕ್ ಲಿಸ್ಟ್ ನಲ್ಲಿದ್ದರೂ ಸರಳತೆ ಹಾಗೂ ಪ್ರಾಮಾಣಿಕತೆಗಾಗಿ ಅವರಿಗೆ ಹೊಸ ಸಂಪುಟದಲ್ಲಿ ಮತ್ತೊಮ್ಮೆ ಸ್ಥಾನ ನೀಡುವ ಸಾಧ್ಯತೆಯೇ ಹೆಚ್ಚು ಎನ್ನಲಾಗಿದೆ. ಕೋಟ ಶ್ರೀನಿವಾಸ ಪೂಜಾರಿಯಂತೂ ತುಂಬಾ ಸರಳ, ಸಜ್ಜನ ರಾಜಕಾರಣಿ ಎಂದೇ ಪ್ರಖ್ಯಾತರಾದವರು. ಸಚಿವರಾದರೂ ಮಂತ್ರಿಗಳಿಗೆ ಸಿಗುವ ಬಂಗ್ಲೆಯನ್ನು ತ್ಯಜಿಸಿ ಶಾಸಕರ ಭವನದಲ್ಲಿರುವ ಅತ್ಯಂತ ಸರಳ ರಾಜಕಾರಣಿ. ಹಾಗೆ ಸುರೇಶ್ ಕುಮಾರ್ ಅವರು ಕೂಡ ಉತ್ತಮ ರಾಜಕಾರಣಿ ಎಂದೇ ಪ್ರಖ್ಯಾತರಾದವರು.

ಇನ್ನು ಹೊಸ ಸಂಪುಟದಲ್ಲಿ ಕಾರ್ಕಳದ ಸುನಿಲ್ ಕುಮಾರ್, ಹಾಸನದ ಪ್ರೀತಂ ಗೌಡ,ಎಸ್.ಎ.ರಾಮದಾಸ್, ರಾಜುಗೌಡ, ಪಿ.ರಾಜೀವ್, ಎಂ.ಪಿ.ರೇಣುಕಾಚಾರ್ಯ, ಹಾಲಪ್ಪ ಆಚಾರ್, ಎಂ.ಪಿ.ಕುಮಾರಸ್ವಾಮಿ, ರೂಪಾಲಿ ನಾಯ್ಕ್ ಮೊದಲಾದವರಿಗೆ ನೂತನ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು