7:38 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ: ಸಿಎಂ

05/10/2025, 21:25

*ನಾವೆಲ್ಲರೂ ಶೂದ್ರರು: ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ: ಸಿ.ಎಂ ಅಭಿಮತ*

*ಸಹಿಷ್ಣುತೆ-ಸಹಬಾಳ್ವೆ ಬಸವಣ್ಣನವರ ಮತ್ತು ನನ್ನ ಬದುಕಿನ ಬದ್ದತೆ: ಸಿಎಂ*

*ಚಲನೆ ಇಲ್ಲದ ಜಾತಿ ವ್ಯವಸ್ಥೆ ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು: ಸಿ.ಎಂ ಸಿದ್ದರಾಮಯ್ಯ*

ಬೆಂಗಳೂರು(reporterkarnataka.com): ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ.‌
ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿದ್ಯದಲ್ಲಿ ಸಮುದಾಯದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿಯ ಸಮ್ಮುಖದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ‌ ನಂಬಿಕೆ-ಬದ್ದತೆ ಇಟ್ಟುಕೊಂಡಿದ್ದೀನಿ.
ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದರು.
ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ ಎಂದು ಅವರು ನುಡಿದರು.


ಜಾತಿಯಿಂದ ಯಾರೂ ಶ್ರೇಷ್ಠರಲ್ಲ. ಹಾಗೆಯೇ ಪ್ರತಿಭೆ, ಜ್ಞಾನ ಕೂಡ ಯಾವುದೇ ಒಂದು ಜಾತಿಯ ಸ್ವತ್ತು ಅಲ್ಲ. ನಾನು ಅರ್ಜಿ ಹಾಕಿಕೊಂಡು ಕುರುಬ ಜಾತಿಯಲ್ಲಿ ಹುಟ್ಟಿಲ್ಲ. ನಾನು ಶೂದ್ರ ಎನ್ನುವ ಕಾರಣಕ್ಕೆ ಶಿಕ್ಷಣ ಪಡೆಯುವ ಅರ್ಹತೆ ಇಲ್ಲ ಎನ್ನುವುದು ಪಟ್ಟಭದ್ರರ ಷಡ್ಯಂತ್ರ ಎಂದರು.
ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ. ಜಾತಿ ವ್ಯವಸ್ಥೆ, ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ. ಜಾತಿ-ವರ್ಗ ರಹಿತ ಮಾನವ ಸಮಾಜದ ನಿರ್ಮಾಣ ಬಸವಣ್ಣನವರ ಕನಸಾಗಿತ್ತು. ನಾವೆಲ್ಲರೂ ಮೊದಲು ಮನುಷ್ಯರು, ಬಳಿಕ ಭಾರತೀಯರು. ಹೀಗಾಗಿ ನಾವು ಮನುಷ್ಯ ನಿರ್ಮಿತ ಜಾತಿ, ಧರ್ಮದ, ಅಸಮಾನತೆಯ ತಾರತಮ್ಯಗಳನ್ನು ಸಹಿಸಬಾರದು, ಆಚರಿಸಬಾರದು ಎಂದು ಕರೆ ನೀಡಿದರು.
ನಾನು ಕಾನೂನು ವಿದ್ಯಾರ್ಥಿ ಆದ ಘಳಿಗೆಯಿಂದ ನಾನು ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದ್ದೇವೆ ಎಂದರು.
ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯ ಆದರೆ ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಹೀಗಾಗಿ ಬಸವಣ್ಣನವರು ಯಾವತ್ತಿಗೂ ಪ್ರಸ್ತುತ ಎಂದು ನುಡಿದರು.
ಬಸವಣ್ಣನವರು ನುಡಿದಂತೆ ನಡೆದರು. ನಾವು ಬಸವ ಅನುಯಾಯಿಗಳೂ ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿ ಗಳಾಗುತ್ತೇವೆ ಎಂದರು.
ನಮ್ಮಲ್ಲಿ ಅನೇಕ ಜಾತಿ, ಅನೇಕ‌ ಧರ್ಮಗಳಿವೆ. ನಾವೆಲ್ಲರೂ ಶೂದ್ರರು. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು ಎಂದು ಅವರು ತಿಳಿಸಿದರು.
ಈ ಅಸಮಾನತೆ ಹೋಗದಿದ್ದರೆ, ಅಸಮಾನತೆಗೆ ಒಳಗಾಗಿರುವ ಸಮುದಾಯಗಳು ಸ್ವಾತಂತ್ರ್ಯ ಸೌಧವನ್ನು ದ್ವಂಸ ಮಾಡುತ್ತಾರೆ ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಎಚ್ಚರಿಕೆಯ ಮಾತುಗಳನ್ನು ನಾವು ನೆನಪಿಡಬೇಕು ಎಂದರು.

*ಮುಂದಿನ ವರ್ಷ ವಚನ ವಿಶ್ವ ವಿದ್ಯಾಲಯ ಸ್ಥಾಪನೆ:*
ವಚನ ವಿಶ್ವ ವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇವೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ ಮೆಟ್ರೋ” ಎಂದು ಘೋಷಿಸಿ ಬಿಡುತ್ತಿದ್ದೆ ಎಂದರು.
ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಕಾರ್ಯಕ್ರಮದಲ್ಲಿ ಲಿಂಗಾಯತ ಧರ್ಮ ಚಳವಳಿಯ ಪ್ರಮುಖರು, ಪ್ರಗತಿಪರ ಚಿಂತಕರು, ಹೋರಾಟಗಾರರು ಉಪಸ್ಥಿತರಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶರಣ ಸಂಸ್ಕೃತಿ ಬಗೆಗಿನ ಬದ್ಧತೆಯನ್ನು ಶ್ಲಾಘಿಸಿ ಅಭಿನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು