7:28 PM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ನ.24ಕ್ಕೆ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ: ವಾಹನ ಚಲಾಯಿಸಿ ಕ್ರೀಡಾ ಜ್ಯೋತಿ ರಥಕ್ಕೆ ಚಾಲನೆ ನೀಡಿದ ಗೃಹ ಸಚಿವ ಡಾ. ಪರಮೇಶ್ವರ್

22/11/2024, 13:35

ಬೆಂಗಳೂರು(reporterkarnataka.com): ತುಮಕೂರಿನಲ್ಲಿ ನ.24ರಂದು ನಡೆಯಲಿರುವ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟದ ಅಂಗವಾಗಿ ಜಿಲ್ಲೆಯಾದ್ಯಂತ ಸಂಚರಿಸಲಿರುವ ಕ್ರೀಡಾ ಜ್ಯೋತಿ ರಥವನ್ನು ಸ್ವತಃ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರೇ ಚಾಲನೆ ಮಾಡುವ ಮೂಲಕ ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು.


ಕ್ರೀಡಾ ಜ್ಯೋತಿ ರಥದ ವಾಹನವನ್ನು ಗೃಹ ಸಚಿವವರು ಚಲಾಯಿಸಿದರೆ, ಅದಕ್ಕೆ ಅವರ ಪತ್ನಿ ಕನ್ನಿಕಾ ಪರಮೇಶ್ವರ ಅವರು ಹಸಿರು ನಿಶಾನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಜಿ.ಪರಮೇಶ್ವರ ಅವರು, ಪತ್ರಕರ್ತರು ಸದಾ ಒತ್ತಡದ ನಡುವೆ ಕೆಲಸ ಮಾಡುತ್ತಿರುತ್ತಾರೆ. ಮಾನಸಿಕ ಒತ್ತಡ ನಿಭಾಯಿಸಲು ದೈಹಿಕ ವ್ಯಯಾಮ ಚಟುವಟಿಕೆಗಳು ಬಹಳ ಮುಖ್ಯವಾಗಿದೆ. ನಾನೂ ಒಬ್ಬ ಕ್ರೀಡಾಪಟುವಾಗಿ ಈ ಕ್ರೀಡಾಕೂಟ ಆಯೋಜನೆಯಿಂದ ಹಿಡಿದು ಅದರ ಭಾಗವಹಿಸಲು ಹೆಮ್ಮೆಯಾಗುತ್ತದೆ ಎಂದರು.
ಕ್ರೀಡೆ ಎಂದರೆ ಎಲ್ಲರನ್ನೂ ಸೌಹಾರ್ಧಯುತವಾಗಿ ಬೆಸೆಯುವಂತಾದ್ದು. ಈ ರಥಯಾತ್ರೆ ಮೂಲಕ ಸೌಹಾದರ್ಶ ಸಂದೇಶವನ್ನು ಎಲ್ಲೆಡೆ ಸಾರಲಿ ಎಂದು ಅವರು ನುಡಿದರು.
ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಈ ಬಾರಿ ತುಮಕೂರಿನಲ್ಲಿ ರಾಜ್ಯ ಮಟ್ಟದ ಕ್ರೀಡಾ ಕೂಟ ಏರ್ಪಡಿಸಲು ಅವಕಾಶ ನೀಡಿರುವುದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.
ತುಮಕೂರಿನ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ರೀಡಾಕೂಟಕ್ಕೆ ಜಿಲ್ಲಾಡಳಿತದ ಪೂರ್ಣ ಸಹಕಾರ ನೀಡಲಾಗುವುದು. ನಮ್ಮ ಅತಿಥಿಗಳಾಗಿ ರಾಜ್ಯದ ಎಲ್ಲಾ ಕಡೆಯಿಂದ ಬರುವ ಪತ್ರಕರ್ತರಿಗೆ ಕಲ್ಪತರ ನಾಡಿನ ಆತಿಥ್ಯ ನೀಡಲಾಗುವುದು ಎಂದು ಹೇಳಿದರು.
ಜಿಲ್ಲಾಧ್ಯಕ್ಷ ಚಿ.ನೀ.ಪುರುಷೋತ್ತಮ ಮಾತನಾಡಿ, ಈ ಕ್ರೀಡಾ ಜ್ಯೋತಿಯನ್ನೊತ್ತ ರಥಯಾತ್ರೆಯು ಎಲ್ಲಾ ತಾಲೂಕುಗಲ್ಲಿ ಮೂರು ದಿನ ಸಂಚರಿಸಲಿದೆ ಎಂದರು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು, ಎಸ್ಪಿ ಕೆ.ವಿ.ಅಶೋಕ್, ಶಾಸಕ ಜ್ಯೋತಿ ಗಣೇಶ್, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಎಡಿಸಿ ತಿಪ್ಪೇಸ್ವಾಮಿ, ಹಿರಿಯ ಪತ್ರಕರ್ತರಾದ ನಾಗಣ್ಣ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ರಘುರಾಮ, ಜಿಲ್ಲಾ ಪದಾಧಿಕಾರಿಗಳಾದ ಶಾಂತರಾಜು, ಮಧುಕರ್, ಡಿ.ಎಂ.ಸತೀಶ್, ಕ್ರೀಡಾ ಸಂಚಾಲಕ ಸತೀಶ್ ಹಾರೋಗೆರೆ, ಪ್ರಚಾರ ಸಮಿತಿ ಅಧ್ಯಕ್ಷ ರಂಗರಾಜು, ಯಶಸ್, ಹರೀಶ್ ಆಚಾರ್ಯ ಮತ್ತಿತರರು ಇದ್ದರು.
ತುಮಕೂರಿನಿಂದ ಹೊರಟ ಕ್ರೀಡಾ ಜ್ಯೋತಿಯ ರಥಕ್ಕೆ ಕುಣಿಗಲ್‌ನಲ್ಲಿ ಸಾಲುಗಟ್ಟ ನಿಂತು ಮೆರವಣಿಗೆ ನಡೆಸುವ ಮೂಲಕ ಭರ್ಜರಿ ಸ್ವಾಗತ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು