8:32 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ನವೆಂಬರ್ 8: ಪ್ರವಾದಿ ಆದರ್ಶ ಕುರಿತು ಮಂಗಳೂರು ಪುರಭವನದಲ್ಲಿ ಸಾರ್ವಜನಿಕ ಸಮಾವೇಶ

06/11/2024, 20:52

ಮಂಗಳೂರು(reporterkarnataka.com): ಪ್ರವಾದಿ ಮುಹಮ್ಮದ್(ಸ)ರು ಜನಿಸಿದ ತಿಂಗಳ ಹಿನ್ನೆಲೆಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ನಗರದ ಟೌನ್ ಹಾಲ್‌ನಲ್ಲಿ ನವೆಂಬರ್ 8 ಶುಕ್ರವಾರ ಸಂಜೆ 6.40ಕ್ಕೆ ಸಾರ್ವಜನಿಕ ಸಭೆಯ ಆಯೋಜಿಸಿದೆ. ಪ್ರವಾದಿ ಮುಹಮ್ಮದ್(ಸ) ಪರಿಚಯಿಸಿದ ಆದರ್ಶ ಸಮಾಜ ಮತ್ತು ಇಂದಿನ ಸವಾಲು ಎಂಬುದು ಕಾರ್ಯಕ್ರಮ ಮುಖ್ಯ ಧೈಯ. ಒಂದು ಆದರ್ಶ ಸಮಾಜವನ್ನು ಕಟ್ಟುವ ದಿಶೆಯಲ್ಲಿ ಮಾಡಲಾವ ಅವಲೋಕನ ಈ ಸಭೆ. ಪ್ರವಾದಿ ಮುಹಮ್ಮದ್(ಸ) ಜನಿಸಿದ ತಿಂಗಳು ಎಂಬ ನೆಲೆಯಲ್ಲಿ ಅವರು ಪರಿಚಯಿ- ಸಾಮಾಜಿಕ ಮೌಲ್ಯಗಳು, ತತ್ವಗಳನ್ನು ಚರ್ಚೆಗೊಡ್ಡುವುದೂ ಈ ಕಾರ್ಯಕ್ರಮದಲ್ಲಿ ನಡೆಯಲಿದೆ. ಹಾಗೆ ಇವತ್ತಿನ ದಿನಗಳಲ್ಲಿ ಉತ್ತಮ ಮೌಲ್ಯಾಧಾರಿತ ಸಮಾಜದ ರಚನೆಗೆ ಎದುರಾಗುತ್ತಿರುವ ಸವಾಲುಗಳೇನು ಎಂಬ ವಿಶ್ಲೇಷಣೆಯೂ ನಡೆಯಿದೆ. ಇದರಲ್ಲಿ ಲೆಫ್ಟಿನೆಂಟ್ ಭವ್ಯಾ ನರಸಿಂಹಮೂರ್ತಿ ಅವರು ಭಾಗವಹಿಸಲಿದ್ದಾರೆ. ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿ, ವಾರ್ತಾಭಾರತಿ ಪ್ರಧಾನ ಸಂಪಾದಕ ಅಬ್ದುಸ್ಸಲಾ ಪುತ್ತಿಗೆ ಮತ್ತು ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞ ಭಾಗವಹಿಸಲಿದ್ದ ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ನಗರಾಧ್ಯಕ್ಷ ಇಸ್ಟಾಕ್ ಪುತ್ತೂರು ಅವರೂ ಮಾತನಾಡಲಿದ ಸರ್ವ ಧರ್ಮೀಯರನ್ನೂ ಜಮಾಅತೆ ಇಸ್ಲಾಮೀ ಹಿಂದ್ ಈ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತದೆ.
ಜಮಾಅತೆ ಇಸ್ಲಾಮೀ ಹಿಂದ್ ಕಳೆದ 8 ದಶಕಗಳಿಂದ ಈ ದೇಶದಲ್ಲಿ ಚಟುವಟಿಕೆಯಲ್ಲಿದ್ದು, ಧಾವಿಸ ಶೈಕ್ಷಣಿಕ, ಸಾಮಾಜಿಕ ರಂಗಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಇಸ್ಲಾಮಿನ ಮೌಲ್ಯಗಳನ್ನು ಜನ ತಿಳಿಸುವುದು, ದೇಶದ ಶಾಂತಿ, ಸುಭದ್ರತೆ ಮತ್ತು ಒಳಿತಿಗಾಗಿ ಶ್ರಮಿಸುವುದನ್ನು ಮಾಡುತ್ತಾ ಬಂದಿದೆ. ದೇ ಬಹುತೇಕ ಎಲ್ಲ ರಾಜ್ಯಗಳಲ್ಲೂ ಇದರ ಘಟಕವಿದ್ದು, ದೆಹಲಿಯಲ್ಲಿ ಕೇಂದ್ರೀಯ ಕಚೇರಿಯಿದೆ. ಡಾ| ಬೆಳಗ ಮುಹಮ್ಮದ್ ಸಾದ್ ರಾಜ್ಯಾಧ್ಯಕ್ಷರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು