8:07 AM Monday11 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ನವೆಂಬರ್ 8: ಪ್ರವಾದಿ ಆದರ್ಶ ಕುರಿತು ಮಂಗಳೂರು ಪುರಭವನದಲ್ಲಿ ಸಾರ್ವಜನಿಕ ಸಮಾವೇಶ

06/11/2024, 20:52

ಮಂಗಳೂರು(reporterkarnataka.com): ಪ್ರವಾದಿ ಮುಹಮ್ಮದ್(ಸ)ರು ಜನಿಸಿದ ತಿಂಗಳ ಹಿನ್ನೆಲೆಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ನಗರದ ಟೌನ್ ಹಾಲ್‌ನಲ್ಲಿ ನವೆಂಬರ್ 8 ಶುಕ್ರವಾರ ಸಂಜೆ 6.40ಕ್ಕೆ ಸಾರ್ವಜನಿಕ ಸಭೆಯ ಆಯೋಜಿಸಿದೆ. ಪ್ರವಾದಿ ಮುಹಮ್ಮದ್(ಸ) ಪರಿಚಯಿಸಿದ ಆದರ್ಶ ಸಮಾಜ ಮತ್ತು ಇಂದಿನ ಸವಾಲು ಎಂಬುದು ಕಾರ್ಯಕ್ರಮ ಮುಖ್ಯ ಧೈಯ. ಒಂದು ಆದರ್ಶ ಸಮಾಜವನ್ನು ಕಟ್ಟುವ ದಿಶೆಯಲ್ಲಿ ಮಾಡಲಾವ ಅವಲೋಕನ ಈ ಸಭೆ. ಪ್ರವಾದಿ ಮುಹಮ್ಮದ್(ಸ) ಜನಿಸಿದ ತಿಂಗಳು ಎಂಬ ನೆಲೆಯಲ್ಲಿ ಅವರು ಪರಿಚಯಿ- ಸಾಮಾಜಿಕ ಮೌಲ್ಯಗಳು, ತತ್ವಗಳನ್ನು ಚರ್ಚೆಗೊಡ್ಡುವುದೂ ಈ ಕಾರ್ಯಕ್ರಮದಲ್ಲಿ ನಡೆಯಲಿದೆ. ಹಾಗೆ ಇವತ್ತಿನ ದಿನಗಳಲ್ಲಿ ಉತ್ತಮ ಮೌಲ್ಯಾಧಾರಿತ ಸಮಾಜದ ರಚನೆಗೆ ಎದುರಾಗುತ್ತಿರುವ ಸವಾಲುಗಳೇನು ಎಂಬ ವಿಶ್ಲೇಷಣೆಯೂ ನಡೆಯಿದೆ. ಇದರಲ್ಲಿ ಲೆಫ್ಟಿನೆಂಟ್ ಭವ್ಯಾ ನರಸಿಂಹಮೂರ್ತಿ ಅವರು ಭಾಗವಹಿಸಲಿದ್ದಾರೆ. ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿ, ವಾರ್ತಾಭಾರತಿ ಪ್ರಧಾನ ಸಂಪಾದಕ ಅಬ್ದುಸ್ಸಲಾ ಪುತ್ತಿಗೆ ಮತ್ತು ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞ ಭಾಗವಹಿಸಲಿದ್ದ ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ನಗರಾಧ್ಯಕ್ಷ ಇಸ್ಟಾಕ್ ಪುತ್ತೂರು ಅವರೂ ಮಾತನಾಡಲಿದ ಸರ್ವ ಧರ್ಮೀಯರನ್ನೂ ಜಮಾಅತೆ ಇಸ್ಲಾಮೀ ಹಿಂದ್ ಈ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತದೆ.
ಜಮಾಅತೆ ಇಸ್ಲಾಮೀ ಹಿಂದ್ ಕಳೆದ 8 ದಶಕಗಳಿಂದ ಈ ದೇಶದಲ್ಲಿ ಚಟುವಟಿಕೆಯಲ್ಲಿದ್ದು, ಧಾವಿಸ ಶೈಕ್ಷಣಿಕ, ಸಾಮಾಜಿಕ ರಂಗಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಇಸ್ಲಾಮಿನ ಮೌಲ್ಯಗಳನ್ನು ಜನ ತಿಳಿಸುವುದು, ದೇಶದ ಶಾಂತಿ, ಸುಭದ್ರತೆ ಮತ್ತು ಒಳಿತಿಗಾಗಿ ಶ್ರಮಿಸುವುದನ್ನು ಮಾಡುತ್ತಾ ಬಂದಿದೆ. ದೇ ಬಹುತೇಕ ಎಲ್ಲ ರಾಜ್ಯಗಳಲ್ಲೂ ಇದರ ಘಟಕವಿದ್ದು, ದೆಹಲಿಯಲ್ಲಿ ಕೇಂದ್ರೀಯ ಕಚೇರಿಯಿದೆ. ಡಾ| ಬೆಳಗ ಮುಹಮ್ಮದ್ ಸಾದ್ ರಾಜ್ಯಾಧ್ಯಕ್ಷರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು