4:10 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ನವೆಂಬರ್ 8: ಪ್ರವಾದಿ ಆದರ್ಶ ಕುರಿತು ಮಂಗಳೂರು ಪುರಭವನದಲ್ಲಿ ಸಾರ್ವಜನಿಕ ಸಮಾವೇಶ

06/11/2024, 20:52

ಮಂಗಳೂರು(reporterkarnataka.com): ಪ್ರವಾದಿ ಮುಹಮ್ಮದ್(ಸ)ರು ಜನಿಸಿದ ತಿಂಗಳ ಹಿನ್ನೆಲೆಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ನಗರದ ಟೌನ್ ಹಾಲ್‌ನಲ್ಲಿ ನವೆಂಬರ್ 8 ಶುಕ್ರವಾರ ಸಂಜೆ 6.40ಕ್ಕೆ ಸಾರ್ವಜನಿಕ ಸಭೆಯ ಆಯೋಜಿಸಿದೆ. ಪ್ರವಾದಿ ಮುಹಮ್ಮದ್(ಸ) ಪರಿಚಯಿಸಿದ ಆದರ್ಶ ಸಮಾಜ ಮತ್ತು ಇಂದಿನ ಸವಾಲು ಎಂಬುದು ಕಾರ್ಯಕ್ರಮ ಮುಖ್ಯ ಧೈಯ. ಒಂದು ಆದರ್ಶ ಸಮಾಜವನ್ನು ಕಟ್ಟುವ ದಿಶೆಯಲ್ಲಿ ಮಾಡಲಾವ ಅವಲೋಕನ ಈ ಸಭೆ. ಪ್ರವಾದಿ ಮುಹಮ್ಮದ್(ಸ) ಜನಿಸಿದ ತಿಂಗಳು ಎಂಬ ನೆಲೆಯಲ್ಲಿ ಅವರು ಪರಿಚಯಿ- ಸಾಮಾಜಿಕ ಮೌಲ್ಯಗಳು, ತತ್ವಗಳನ್ನು ಚರ್ಚೆಗೊಡ್ಡುವುದೂ ಈ ಕಾರ್ಯಕ್ರಮದಲ್ಲಿ ನಡೆಯಲಿದೆ. ಹಾಗೆ ಇವತ್ತಿನ ದಿನಗಳಲ್ಲಿ ಉತ್ತಮ ಮೌಲ್ಯಾಧಾರಿತ ಸಮಾಜದ ರಚನೆಗೆ ಎದುರಾಗುತ್ತಿರುವ ಸವಾಲುಗಳೇನು ಎಂಬ ವಿಶ್ಲೇಷಣೆಯೂ ನಡೆಯಿದೆ. ಇದರಲ್ಲಿ ಲೆಫ್ಟಿನೆಂಟ್ ಭವ್ಯಾ ನರಸಿಂಹಮೂರ್ತಿ ಅವರು ಭಾಗವಹಿಸಲಿದ್ದಾರೆ. ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿ, ವಾರ್ತಾಭಾರತಿ ಪ್ರಧಾನ ಸಂಪಾದಕ ಅಬ್ದುಸ್ಸಲಾ ಪುತ್ತಿಗೆ ಮತ್ತು ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞ ಭಾಗವಹಿಸಲಿದ್ದ ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ನಗರಾಧ್ಯಕ್ಷ ಇಸ್ಟಾಕ್ ಪುತ್ತೂರು ಅವರೂ ಮಾತನಾಡಲಿದ ಸರ್ವ ಧರ್ಮೀಯರನ್ನೂ ಜಮಾಅತೆ ಇಸ್ಲಾಮೀ ಹಿಂದ್ ಈ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತದೆ.
ಜಮಾಅತೆ ಇಸ್ಲಾಮೀ ಹಿಂದ್ ಕಳೆದ 8 ದಶಕಗಳಿಂದ ಈ ದೇಶದಲ್ಲಿ ಚಟುವಟಿಕೆಯಲ್ಲಿದ್ದು, ಧಾವಿಸ ಶೈಕ್ಷಣಿಕ, ಸಾಮಾಜಿಕ ರಂಗಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಇಸ್ಲಾಮಿನ ಮೌಲ್ಯಗಳನ್ನು ಜನ ತಿಳಿಸುವುದು, ದೇಶದ ಶಾಂತಿ, ಸುಭದ್ರತೆ ಮತ್ತು ಒಳಿತಿಗಾಗಿ ಶ್ರಮಿಸುವುದನ್ನು ಮಾಡುತ್ತಾ ಬಂದಿದೆ. ದೇ ಬಹುತೇಕ ಎಲ್ಲ ರಾಜ್ಯಗಳಲ್ಲೂ ಇದರ ಘಟಕವಿದ್ದು, ದೆಹಲಿಯಲ್ಲಿ ಕೇಂದ್ರೀಯ ಕಚೇರಿಯಿದೆ. ಡಾ| ಬೆಳಗ ಮುಹಮ್ಮದ್ ಸಾದ್ ರಾಜ್ಯಾಧ್ಯಕ್ಷರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು