11:23 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ನವೆಂಬರ್ 23: ತೇಜಸ್ವಿ ಪ್ರತಿಷ್ಠಾನದಲ್ಲಿ ‘ಕನ್ನಡ ಭಾಷಾಭಿವೃದ್ದಿಗೆ ತಂತ್ರಜ್ಞಾನದ ಪಾತ್ರ’ ವಿಚಾರಗೋಷ್ಠಿ

15/11/2022, 20:23

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ನವೆಂಬರ್ 23 ರಂದು ತೇಜಸ್ವಿ ಸಾಹಿತ್ಯ-ನುಡಿ ಸಂಭ್ರಮ ವಿಚಾರಗೋಷ್ಠಿ ನಡೆಯಲಿದೆ.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ತೇಜಸ್ವಿ ಸಾಹಿತ್ಯ-ನುಡಿ ಸಂಭ್ರಮ ವಿಚಾರಗೋಷ್ಠಿ ನಡೆಯಲಿದ್ದು ರಂಗಕರ್ಮಿಗಳು ಹಾಗೂ ರಂಗ ನಿರ್ದೇಶಕರಾದ ಪ್ರಸಾದ್ ರಕ್ಷಿದಿ ಅವರು ಕನ್ನಡ ಭಾಷಾಭಿವೃದ್ದಿಗೆ ತಂತ್ರಜ್ಞಾನದ ಪಾತ್ರ ವಿಷಯದ ಬಗ್ಗೆ ಮಾತನಾಡಲಿದ್ದಾರೆ. ನಿವೃತ್ತ ಪ್ರಾಂಶುಪಾಲರಾದ ವೇಣುಗೋಪಾಲ್ ಅವರು ಕನ್ನಡ ಭಾಷಾಭಿವೃದ್ದಿಯ ಕುರಿತ ತೇಜಸ್ವಿ ಅವರ ಚಿಂತನೆಗಳು ವಿಷಯದ ಬಗ್ಗೆ ಮಾತನಾಡಲಿದ್ದಾರೆ. ನಂತರ ಕನ್ನಡ ಕಟ್ಟುವ ಬಗೆ ಕುರಿತು ಸಂವಾದ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ವಿಚಾರಗೋಷ್ಠಿ ಆರಂಭವಾಗಲಿದ್ದು ಕಾರ್ಯಕ್ರಮದಲ್ಲಿ ಭಾಗವಹಿಸುವವರು 8971964913,9663098873 ಸಂಖ್ಯೆಗೆ ಸಂಪರ್ಕಿಸಿ ಹೆಸರು ನೋಂದಾಯಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಸಿ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು