ಇತ್ತೀಚಿನ ಸುದ್ದಿ
ಎನ್.ಆರ್.ಪುರ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು; ಸ್ಥಳೀಯರ ಪ್ರತಿಭಟನೆ
24/06/2025, 23:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿ, ವ್ಯಕ್ತಿ ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಮಡಬೂರು ಬಳಿ ನಡೆದಿದೆ.
ಚಂದ್ರಶೇಖರ್ (55) ಮೃತ ದುರ್ದೈವಿಯಾಗಿದ್ದಾರೆ.
ಕಳೆದ ರಾತ್ರಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡ ಚಂದ್ರಶೇಖರ್ ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಸರ್ಕಾರದ ವಿರುದ್ಧ ರಸ್ತೆಗೆ ಬಾಳೆಗಿಡ ನೆಟ್ಟು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ರಸ್ತೆ ಗುಂಡಿ ಮುಚ್ಚುವಂತೆ ಶಾಸಕರಿಗೆ ಸ್ಥಳಿಯರ ಆಗ್ರಹಿಸಿದ್ದಾರೆ.
ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.