8:33 AM Sunday8 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಎನ್. ಆರ್. ಪುರ: ಭದ್ರಾ ನದಿಯಲ್ಲಿ ತೆಪ್ಪ ಮುಳುಗಿ 3 ಮಂದಿ ಪ್ರವಾಸಿಗರು ನೀರುಪಾಲು

20/06/2024, 14:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ತೆಪ್ಪ ಮುಳುಗಿ ಭದ್ರಾ ನದಿಯಲ್ಲಿ ಮೂವರು ಸಾವು ಪ್ರಕರಣ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್.ಪುರ ತಾಲೂಕಿನಲ್ಲಿ ನಡೆದಿದೆ.
ಭದ್ರಾ ಬ್ಯಾಕ್ ವಾಟರ್ ನಲ್ಲಿ ಮೂವರ ಶವ ಪತ್ತೆಯಾಗಿದೆ.
ಮೃತದೇಹ ಹೊರತೆಗೆಯಲು ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗು ತಜ್ಞರು ಸಹಕರಿಸಿದರು.
ಮೃತದೇಹವನ್ನು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಶವಗಾರಕ್ಕೆ ರವಾನೆ ಮಾಡಲಾಗಿದೆ.
ನಿನ್ನೆಯೂ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಶೋಧ ಕಾರ್ಯ ನಡೆಸಿದ್ದರು…


ಕತ್ತಲಾದ ಬಳಿಕ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿತ್ತು.
ಇಂದು ಮುಂಜಾನೆಯಿಂದ ಮತ್ತೆ ಶೋಧ ಕಾರ್ಯ ಆರಂಭಿಸಲಾಯಿತು.ಭದ್ರಾ ನದಿ ಹಿನ್ನೀರಿಗೆ ನಾಲ್ವರು ಸ್ನೇಹಿತರು ನಿನ್ನೆ ಪ್ರವಾಸಕ್ಕೆ ಆಗಮಿಸಿದ್ದರು.
ಮೂವರು ತೆಪ್ಪದಲ್ಲಿ ಹೋಗಿದ್ದರು, ಓರ್ವ ದಡದಲ್ಲಿ ಇದ್ದ. ತೆಪ್ಪದಲ್ಲಿ ತೆರಳುವಾಗ ತೆಪ್ಪ ಮಗುಚಿ ಮೂವರು ನೀರು ಪಾಲಾಗಿದ್ದರು. ಆದೀಲ್, ಸಾಜೀದ್ ಹಾಗೂ ಅಫ್ಧಾಖಾನ್ ಮೃತ ದುರ್ದೈವಿಗಳು.
ಮೃತರು ಶಿವಮೊಗ್ಗದ ವಿದ್ಯಾನಗರ ಮೂಲದವರು ಎಂದು ತಿಳಿದು ಬಂದಿದೆ.
ಎನ್.ಆರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ಈ ದುರ್ಘಟನೆ ನಡೆದಿದೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು