12:32 PM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಎನ್. ಆರ್. ಪುರ: ಭದ್ರಾ ನದಿಯಲ್ಲಿ ತೆಪ್ಪ ಮುಳುಗಿ 3 ಮಂದಿ ಪ್ರವಾಸಿಗರು ನೀರುಪಾಲು

20/06/2024, 14:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ತೆಪ್ಪ ಮುಳುಗಿ ಭದ್ರಾ ನದಿಯಲ್ಲಿ ಮೂವರು ಸಾವು ಪ್ರಕರಣ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್.ಪುರ ತಾಲೂಕಿನಲ್ಲಿ ನಡೆದಿದೆ.
ಭದ್ರಾ ಬ್ಯಾಕ್ ವಾಟರ್ ನಲ್ಲಿ ಮೂವರ ಶವ ಪತ್ತೆಯಾಗಿದೆ.
ಮೃತದೇಹ ಹೊರತೆಗೆಯಲು ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗು ತಜ್ಞರು ಸಹಕರಿಸಿದರು.
ಮೃತದೇಹವನ್ನು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಶವಗಾರಕ್ಕೆ ರವಾನೆ ಮಾಡಲಾಗಿದೆ.
ನಿನ್ನೆಯೂ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಶೋಧ ಕಾರ್ಯ ನಡೆಸಿದ್ದರು…


ಕತ್ತಲಾದ ಬಳಿಕ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿತ್ತು.
ಇಂದು ಮುಂಜಾನೆಯಿಂದ ಮತ್ತೆ ಶೋಧ ಕಾರ್ಯ ಆರಂಭಿಸಲಾಯಿತು.ಭದ್ರಾ ನದಿ ಹಿನ್ನೀರಿಗೆ ನಾಲ್ವರು ಸ್ನೇಹಿತರು ನಿನ್ನೆ ಪ್ರವಾಸಕ್ಕೆ ಆಗಮಿಸಿದ್ದರು.
ಮೂವರು ತೆಪ್ಪದಲ್ಲಿ ಹೋಗಿದ್ದರು, ಓರ್ವ ದಡದಲ್ಲಿ ಇದ್ದ. ತೆಪ್ಪದಲ್ಲಿ ತೆರಳುವಾಗ ತೆಪ್ಪ ಮಗುಚಿ ಮೂವರು ನೀರು ಪಾಲಾಗಿದ್ದರು. ಆದೀಲ್, ಸಾಜೀದ್ ಹಾಗೂ ಅಫ್ಧಾಖಾನ್ ಮೃತ ದುರ್ದೈವಿಗಳು.
ಮೃತರು ಶಿವಮೊಗ್ಗದ ವಿದ್ಯಾನಗರ ಮೂಲದವರು ಎಂದು ತಿಳಿದು ಬಂದಿದೆ.
ಎನ್.ಆರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ಈ ದುರ್ಘಟನೆ ನಡೆದಿದೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು