6:16 PM Tuesday25 - November 2025
ಬ್ರೇಕಿಂಗ್ ನ್ಯೂಸ್
Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ…

ಇತ್ತೀಚಿನ ಸುದ್ದಿ

ಎನ್. ಎಸ್. ಪತ್ತಾರ್ ಅವರಿಂದ ‘ಸಬ್‌ಲೈಮ್ ಲಿರಿಕ್ಸ್’ ಚಿತ್ರಕಲಾ ಪ್ರದರ್ಶನ ಮಾರ್ಚ್ 1ರಿಂದ 10ರ ವರೆಗೆ

28/02/2024, 20:15

ಮಂಗಳೂರು(reporterkarnataka.com): ಗ್ಯಾಲರಿ ಆರ್ಕಿಡ್ ಮಾರ್ಚ್ 1 ರಿಂದ ಮಾರ್ಚ್ 10, 2024 ರವರೆಗೆ ಚಿತ್ರಕಲಾವಿದ ಎನ್.ಎಸ್. ಪತ್ತಾರ್ ಅವರ “ಸಬ್‌ಲೈಮ್ ಲಿರಿಕ್ಸ್” ಪೇಂಟಿಂಗ್ಸ್ ಪ್ರದರ್ಶನ ಹಮ್ಮಿಕೊಂಡಿದೆ.
ಪ್ರದರ್ಶನವು ಕಳೆದ ನಾಲ್ಕು ವರ್ಷಗಳಲ್ಲಿ ಅವರು ರಚಿಸಿದ 21 ಚಿತ್ರಕಲೆಗಳನ್ನು ಪ್ರದರ್ಶಿಸುತ್ತದೆ. ಮಂಗಳೂರಿನ ಮಹಾಲಸ ಕಲಾ ಮಹಾವಿದ್ಯಾಲಯದ ಚಿತ್ರಕಲಾ ವಿಭಾಗದ ಮುಖ್ಯಸ್ಥರೂ ಆಗಿರುವ ಪ್ರತಿಷ್ಠಿತ ಕಲಾವಿದ ಎನ್.ಎಸ್. ಪತ್ತಾರ್, ಅವರು “ಸಬ್‌ಲೈಮ್ ಲಿರಿಕ್ಸ್” ಮೂಲಕ ತಮ್ಮ ಮೊದಲ ಏಕವ್ಯಕ್ತಿ ಪ್ರದರ್ಶನವನ್ನು ಪ್ರಸ್ತುತಪಡಿಸುತ್ತಿದ್ದಾರೆ.
ಉದ್ಘಾಟನಾ ಸಮಾರಂಭವು ಮಾರ್ಚ್ 1, 2024 ರಂದು ಸಂಜೆ 5 ಗಂಟೆಗೆ, ಗ್ಯಾಲರಿ ಆರ್ಕಿಡ್, ಹೇಮಾವತಿ ಕಟ್ಟಡ, ಬಲ್ಮಠ, ಮಂಗಳೂರು ಇಲ್ಲಿ ನಡೆಯಲಿದೆ.
ಆರ್ಕಿಟೆಕ್ಟ್ ಗುಲ್ಶನ್ ರೊಯ್, ಪ್ರದರ್ಶನವನ್ನು ಉದ್ಘಾಟಿಸಲಿರುವರು. ಮಹಾಲಸ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಬಾಬುರಾವ್, ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರದರ್ಶನದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 6ರ ವರೆಗೆ ಗ್ಯಾಲರಿ ತೆರೆದಿರುವುದೆಂದು ಗ್ಯಾಲರಿ ಆರ್ಕಿಡ್ ನಿರ್ದೇಶಕರಾದ ವಿಲಿಯಮ್ ಪಾಯ್ಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು