1:02 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಎನ್. ಎಸ್. ಪತ್ತಾರ್ ಅವರಿಂದ ‘ಸಬ್‌ಲೈಮ್ ಲಿರಿಕ್ಸ್’ ಚಿತ್ರಕಲಾ ಪ್ರದರ್ಶನ ಮಾರ್ಚ್ 1ರಿಂದ 10ರ ವರೆಗೆ

28/02/2024, 20:15

ಮಂಗಳೂರು(reporterkarnataka.com): ಗ್ಯಾಲರಿ ಆರ್ಕಿಡ್ ಮಾರ್ಚ್ 1 ರಿಂದ ಮಾರ್ಚ್ 10, 2024 ರವರೆಗೆ ಚಿತ್ರಕಲಾವಿದ ಎನ್.ಎಸ್. ಪತ್ತಾರ್ ಅವರ “ಸಬ್‌ಲೈಮ್ ಲಿರಿಕ್ಸ್” ಪೇಂಟಿಂಗ್ಸ್ ಪ್ರದರ್ಶನ ಹಮ್ಮಿಕೊಂಡಿದೆ.
ಪ್ರದರ್ಶನವು ಕಳೆದ ನಾಲ್ಕು ವರ್ಷಗಳಲ್ಲಿ ಅವರು ರಚಿಸಿದ 21 ಚಿತ್ರಕಲೆಗಳನ್ನು ಪ್ರದರ್ಶಿಸುತ್ತದೆ. ಮಂಗಳೂರಿನ ಮಹಾಲಸ ಕಲಾ ಮಹಾವಿದ್ಯಾಲಯದ ಚಿತ್ರಕಲಾ ವಿಭಾಗದ ಮುಖ್ಯಸ್ಥರೂ ಆಗಿರುವ ಪ್ರತಿಷ್ಠಿತ ಕಲಾವಿದ ಎನ್.ಎಸ್. ಪತ್ತಾರ್, ಅವರು “ಸಬ್‌ಲೈಮ್ ಲಿರಿಕ್ಸ್” ಮೂಲಕ ತಮ್ಮ ಮೊದಲ ಏಕವ್ಯಕ್ತಿ ಪ್ರದರ್ಶನವನ್ನು ಪ್ರಸ್ತುತಪಡಿಸುತ್ತಿದ್ದಾರೆ.
ಉದ್ಘಾಟನಾ ಸಮಾರಂಭವು ಮಾರ್ಚ್ 1, 2024 ರಂದು ಸಂಜೆ 5 ಗಂಟೆಗೆ, ಗ್ಯಾಲರಿ ಆರ್ಕಿಡ್, ಹೇಮಾವತಿ ಕಟ್ಟಡ, ಬಲ್ಮಠ, ಮಂಗಳೂರು ಇಲ್ಲಿ ನಡೆಯಲಿದೆ.
ಆರ್ಕಿಟೆಕ್ಟ್ ಗುಲ್ಶನ್ ರೊಯ್, ಪ್ರದರ್ಶನವನ್ನು ಉದ್ಘಾಟಿಸಲಿರುವರು. ಮಹಾಲಸ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಬಾಬುರಾವ್, ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರದರ್ಶನದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 6ರ ವರೆಗೆ ಗ್ಯಾಲರಿ ತೆರೆದಿರುವುದೆಂದು ಗ್ಯಾಲರಿ ಆರ್ಕಿಡ್ ನಿರ್ದೇಶಕರಾದ ವಿಲಿಯಮ್ ಪಾಯ್ಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು