10:25 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಎನ್. ಎಸ್. ಪತ್ತಾರ್ ಅವರಿಂದ ‘ಸಬ್‌ಲೈಮ್ ಲಿರಿಕ್ಸ್’ ಚಿತ್ರಕಲಾ ಪ್ರದರ್ಶನ ಮಾರ್ಚ್ 1ರಿಂದ 10ರ ವರೆಗೆ

28/02/2024, 20:15

ಮಂಗಳೂರು(reporterkarnataka.com): ಗ್ಯಾಲರಿ ಆರ್ಕಿಡ್ ಮಾರ್ಚ್ 1 ರಿಂದ ಮಾರ್ಚ್ 10, 2024 ರವರೆಗೆ ಚಿತ್ರಕಲಾವಿದ ಎನ್.ಎಸ್. ಪತ್ತಾರ್ ಅವರ “ಸಬ್‌ಲೈಮ್ ಲಿರಿಕ್ಸ್” ಪೇಂಟಿಂಗ್ಸ್ ಪ್ರದರ್ಶನ ಹಮ್ಮಿಕೊಂಡಿದೆ.
ಪ್ರದರ್ಶನವು ಕಳೆದ ನಾಲ್ಕು ವರ್ಷಗಳಲ್ಲಿ ಅವರು ರಚಿಸಿದ 21 ಚಿತ್ರಕಲೆಗಳನ್ನು ಪ್ರದರ್ಶಿಸುತ್ತದೆ. ಮಂಗಳೂರಿನ ಮಹಾಲಸ ಕಲಾ ಮಹಾವಿದ್ಯಾಲಯದ ಚಿತ್ರಕಲಾ ವಿಭಾಗದ ಮುಖ್ಯಸ್ಥರೂ ಆಗಿರುವ ಪ್ರತಿಷ್ಠಿತ ಕಲಾವಿದ ಎನ್.ಎಸ್. ಪತ್ತಾರ್, ಅವರು “ಸಬ್‌ಲೈಮ್ ಲಿರಿಕ್ಸ್” ಮೂಲಕ ತಮ್ಮ ಮೊದಲ ಏಕವ್ಯಕ್ತಿ ಪ್ರದರ್ಶನವನ್ನು ಪ್ರಸ್ತುತಪಡಿಸುತ್ತಿದ್ದಾರೆ.
ಉದ್ಘಾಟನಾ ಸಮಾರಂಭವು ಮಾರ್ಚ್ 1, 2024 ರಂದು ಸಂಜೆ 5 ಗಂಟೆಗೆ, ಗ್ಯಾಲರಿ ಆರ್ಕಿಡ್, ಹೇಮಾವತಿ ಕಟ್ಟಡ, ಬಲ್ಮಠ, ಮಂಗಳೂರು ಇಲ್ಲಿ ನಡೆಯಲಿದೆ.
ಆರ್ಕಿಟೆಕ್ಟ್ ಗುಲ್ಶನ್ ರೊಯ್, ಪ್ರದರ್ಶನವನ್ನು ಉದ್ಘಾಟಿಸಲಿರುವರು. ಮಹಾಲಸ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಬಾಬುರಾವ್, ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರದರ್ಶನದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 6ರ ವರೆಗೆ ಗ್ಯಾಲರಿ ತೆರೆದಿರುವುದೆಂದು ಗ್ಯಾಲರಿ ಆರ್ಕಿಡ್ ನಿರ್ದೇಶಕರಾದ ವಿಲಿಯಮ್ ಪಾಯ್ಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು