8:41 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಎನ್ನೆಸ್ಸೆಸ್ ನಿಂದ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

25/09/2022, 19:39

ಪುತ್ತೂರು(reporterkarnataka.com): ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸ್‌ಸಿ ಸಹಭಾಗಿತ್ವದಲ್ಲಿ ಮಾಹಿತಿ ಕಾರ್ಯಾಗಾರ ಶುಕ್ರವಾರ ಜರುಗಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ಮಾತನಾಡಿ,  ರಾಷ್ಟ್ರೀಯ ಸೇವಾ ಯೋಜನೆಯನ್ನು ಅಂತರ್ಗತಗೊಳಿಸುವ ವಿದ್ಯಾರ್ಥಿಗಳಿಗೆ ಹೊಸ ಹೊಸ ಅನುಭವಗಳು ಲಭಿಸುತ್ತವೆ.  ಹಾಗೂ  ಉತ್ತಮ ಗೌರವ ದೊರಕುತ್ತದೆ. ಉಳಿದ ವಿದ್ಯಾರ್ಥಿಗಳಿಗಿಂತ ಹೆಚ್ಚಿನ ಜ್ಞಾನ ಮತ್ತು ಅನುಭವವನ್ನು ಗಳಿಸಲು ರಾಷ್ಟ್ರೀಯ ಸೇವಾ ಯೋಜನೆಯು ಸಹಕಾರಿಯಾಗುತ್ತದೆ. ಇಲ್ಲಿಂದ ಸಿಗುವಂತಹ ಜ್ಞಾನವನ್ನು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳುವುದು ಒಂದು ಕಲೆ. ಅಂತಹ ಕಲೆ ಒಲಿಯುವುದು ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಗೆ ಮಾತ್ರ. ವಿದ್ಯಾರ್ಥಿಗಳು ಕಾಲೇಜಿನ ಪಾಠವು ಔದ್ಯೋಗಿಕ ಜೀವನಕ್ಕೆ ಪೂರಕವಾಗಿರುತ್ತದೆ. ಆದರೆ ನಮ್ಮ ಜೀವನಕ್ಕೆ ಪೂರಕವಾಗುವಂತಹ ಪಾಠಗಳು ದೊರಕುವುದು ಪುಸ್ತಕದಿಂದಲ್ಲ, ಜೀವನಕ್ಕೆ ಬೇಕಾದಂತಹ  ಮೌಲ್ಯಗಳನ್ನು ನಾವು ಗಳಿಸಿಕೊಳ್ಳಬೇಕಾದರೆ ನಾವು  ಉತ್ತಮ ಚಿಂತಕರಾಗಿ ,ಹಾಗೂ ಉತ್ತಮ ಪ್ರಜೆಯಾಗಿ ಬಾಳಬೇಕಾದರೆ ಅಲ್ಲೂ ಕೂಡ ಜ್ಞಾನ ಬೇಕಾಗುತ್ತದೆ .ಆ ಜ್ಞಾನವು ರಾಷ್ಟ್ರೀಯ ಸೇವಯೋಜನೆಯಿಂದ ದೊರಕುತ್ತದೆ ಎಂದು ಹೇಳಿದರು

ವಿದ್ಯಾರ್ಥಿಗಳ ಮನಸ್ಸಲ್ಲಿ ಸಮಾಜ ಸೇವೆಯ ಮನೋಭಾವವನ್ನು ಬೆಳೆಸುವಲ್ಲಿ ಇದು ಪ್ರಧಾನ ಪಾತ್ರ ವಹಿಸುವುದರೊಂದಿಗೆ ದೇಶಕ್ಕೆ ಬೇಕಾದಂತಹ ಸತ್ಪ್ರಜೆಗಳ ನಿರ್ಮಾಣದಲ್ಲಿ ಕೂಡ ಎನ್ ಎಸ್ ಎಸ್ ಪ್ರಧಾನ ಪಾತ್ರ ವಹಿಸುತ್ತದೆ. ದೇಶವನ್ನು, ಗುರುಗಳನ್ನು ಹೆತ್ತವರನ್ನು, ಹಿರಿಯರನ್ನು, ಗೌರವಿಸುವ ಮನಸ್ಥಿತಿ ಜೀವನಕ್ಕೆ ಮುಖ್ಯವಾಗಿದೆ. ಇದನ್ನು ರಾಷ್ಟ್ರೀಯ ಸೇವಾ ಯೋಜನೆಯಿಂದ ಪಡೆಯಲು ಸಾಧ್ಯ. ಎಂದು ನುಡಿದರು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ, ಶ್ರೀನಾಥ್. ಬಿ,ವಿದ್ಯಾ ಕೆ. ಎನ್. ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕಿಯರು ಎನ್ಎಸ್ಎಸ್ ಗೀತೆಯನ್ನು ಹಾಡಿದರು. ವಿನುಷಾ ಸ್ವಾಗತಿಸಿದರು. ಮಿಥುನ್ ವಂದಿಸಿದರು ಅನನ್ಯ ಕಮಿಲ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು