5:21 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ನ್ಯಾಯಕ್ಕಾಗಿ ಮಗು ಜತೆ ರಾತ್ರಿ 1 ಗಂಟೆ ವರೆಗೂ ಪೊಲೀಸ್ ಠಾಣೆಯಲ್ಲಿ ಧರಣಿ ಕೂತ ಮಹಿಳೆ!: ಕೊನೆಗೂ ಎಫ್ ಐಆರ್ ದಾಖಲು

02/06/2023, 10:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನ್ಯಾಯಕ್ಕಾಗಿ 4 ವರ್ಷದ ಮಗು ಜೊತೆ ರಾತ್ರಿ 1 ಗಂಟೆವರೆಗೂ ಸಂಸೆಯ ಮಹಿಳೆಯೊಬ್ಬರು ಕಳಸ
ಪೊಲೀಸ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಧರಣಿ ಕುಳಿತ ಘಟನೆ ನಡೆದಿದೆ.
ಯುವಕರ ಅಸಭ್ಯ ವರ್ತನೆ ಹಾಗೂ ಗಂಡನಿಗೆ ಜೀವ ಬೆದರಿಕೆ ಇದೆ ಅಂತ ಮಹಿಳೆ ಕುದುರೆಮುಖ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಲಿಲ್ಲ. ಎಫ್ ಐಆರ್ ದಾಖಲಾಗದೆ ಮನೆಗೆ ಹೋಗಲ್ಲ ಅಂತ ಮಹಿಳೆ ಕಳಸ ಪೊಲೀಸ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಕುಳಿತೇ ಬಿಟ್ಟರು.
ಮಗುವಿಗೆ ಇನ್ಸ್ ಪೆಕ್ಟರ್ ಕಚೇರಿಯಲ್ಲೇ ಊಟ ಮಾಡಿಸಿ ಮಲಗಿಸಿದರು.
ಪಕ್ಕದ ಮನೆ ಯುವಕರು ಅಸಭ್ಯ ವರ್ತನೆ ಮಾಡುತ್ತಿದ್ದಾರೆ ಮತ್ತು ಪತಿಗೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು. ಅಸಭ್ಯ ವರ್ತನೆಯ ವಿಡಿಯೋ ನೀಡಿದರೂ ಕುದುರೆಮುಖ ಪೊಲೀಸರು ದೂರು ದಾಖಲಿಸಿಲ್ಲ. ಇದರಿಂದ ಆಕ್ರೋಶಗೊಂಡ ಮಹಿಳೆ ಕಳಸ‌ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಮಧ್ಯರಾತ್ರಿವರೆಗೂ ಕುಳಿತರು.
ಮಹಿಳೆಯ ಆಕ್ರೋಶ ಹಿನ್ನೆಲೆ ಪೊಲೀಸರಿಂದ ಮಧ್ಯರಾತ್ರಿ ಯುವಕರ ವಿರುದ್ಧ ಎಫ್.ಐ.ಆರ್. ದಾಖಲು ಮಾಡಲಾಯಿತು.


ಕುದುರೆಮುಖ ಪೊಲೀಸದ ಠಾಣೆ ವ್ಯಾಪ್ತಿಯ ಸಂಸೆ ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಅಸಭ್ಯ ವರ್ತನೆ ಮಾಡಿದ ನವೀನ್, ಶ್ರೇಯಾಂಶ್ ವಿರುದ್ಧ ದೂರು ದಾಖಲಾಗಿದೆ. ಎರಡು ದಿನದ ಹಿಂದೆ ದೂರು ನೀಡಿದರೂ ಪೊಲೀಸರು ಎಫ್ ಐಆರ್ ದಾಖಲು ಮಾಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು