5:55 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ನ್ಯಾಯಕ್ಕಾಗಿ ಮಗು ಜತೆ ರಾತ್ರಿ 1 ಗಂಟೆ ವರೆಗೂ ಪೊಲೀಸ್ ಠಾಣೆಯಲ್ಲಿ ಧರಣಿ ಕೂತ ಮಹಿಳೆ!: ಕೊನೆಗೂ ಎಫ್ ಐಆರ್ ದಾಖಲು

02/06/2023, 10:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನ್ಯಾಯಕ್ಕಾಗಿ 4 ವರ್ಷದ ಮಗು ಜೊತೆ ರಾತ್ರಿ 1 ಗಂಟೆವರೆಗೂ ಸಂಸೆಯ ಮಹಿಳೆಯೊಬ್ಬರು ಕಳಸ
ಪೊಲೀಸ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಧರಣಿ ಕುಳಿತ ಘಟನೆ ನಡೆದಿದೆ.
ಯುವಕರ ಅಸಭ್ಯ ವರ್ತನೆ ಹಾಗೂ ಗಂಡನಿಗೆ ಜೀವ ಬೆದರಿಕೆ ಇದೆ ಅಂತ ಮಹಿಳೆ ಕುದುರೆಮುಖ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಲಿಲ್ಲ. ಎಫ್ ಐಆರ್ ದಾಖಲಾಗದೆ ಮನೆಗೆ ಹೋಗಲ್ಲ ಅಂತ ಮಹಿಳೆ ಕಳಸ ಪೊಲೀಸ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಕುಳಿತೇ ಬಿಟ್ಟರು.
ಮಗುವಿಗೆ ಇನ್ಸ್ ಪೆಕ್ಟರ್ ಕಚೇರಿಯಲ್ಲೇ ಊಟ ಮಾಡಿಸಿ ಮಲಗಿಸಿದರು.
ಪಕ್ಕದ ಮನೆ ಯುವಕರು ಅಸಭ್ಯ ವರ್ತನೆ ಮಾಡುತ್ತಿದ್ದಾರೆ ಮತ್ತು ಪತಿಗೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು. ಅಸಭ್ಯ ವರ್ತನೆಯ ವಿಡಿಯೋ ನೀಡಿದರೂ ಕುದುರೆಮುಖ ಪೊಲೀಸರು ದೂರು ದಾಖಲಿಸಿಲ್ಲ. ಇದರಿಂದ ಆಕ್ರೋಶಗೊಂಡ ಮಹಿಳೆ ಕಳಸ‌ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಮಧ್ಯರಾತ್ರಿವರೆಗೂ ಕುಳಿತರು.
ಮಹಿಳೆಯ ಆಕ್ರೋಶ ಹಿನ್ನೆಲೆ ಪೊಲೀಸರಿಂದ ಮಧ್ಯರಾತ್ರಿ ಯುವಕರ ವಿರುದ್ಧ ಎಫ್.ಐ.ಆರ್. ದಾಖಲು ಮಾಡಲಾಯಿತು.


ಕುದುರೆಮುಖ ಪೊಲೀಸದ ಠಾಣೆ ವ್ಯಾಪ್ತಿಯ ಸಂಸೆ ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಅಸಭ್ಯ ವರ್ತನೆ ಮಾಡಿದ ನವೀನ್, ಶ್ರೇಯಾಂಶ್ ವಿರುದ್ಧ ದೂರು ದಾಖಲಾಗಿದೆ. ಎರಡು ದಿನದ ಹಿಂದೆ ದೂರು ನೀಡಿದರೂ ಪೊಲೀಸರು ಎಫ್ ಐಆರ್ ದಾಖಲು ಮಾಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು