3:11 AM Monday12 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ನ್ಯಾಯಕ್ಕಾಗಿ ಮಗು ಜತೆ ರಾತ್ರಿ 1 ಗಂಟೆ ವರೆಗೂ ಪೊಲೀಸ್ ಠಾಣೆಯಲ್ಲಿ ಧರಣಿ ಕೂತ ಮಹಿಳೆ!: ಕೊನೆಗೂ ಎಫ್ ಐಆರ್ ದಾಖಲು

02/06/2023, 10:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನ್ಯಾಯಕ್ಕಾಗಿ 4 ವರ್ಷದ ಮಗು ಜೊತೆ ರಾತ್ರಿ 1 ಗಂಟೆವರೆಗೂ ಸಂಸೆಯ ಮಹಿಳೆಯೊಬ್ಬರು ಕಳಸ
ಪೊಲೀಸ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಧರಣಿ ಕುಳಿತ ಘಟನೆ ನಡೆದಿದೆ.
ಯುವಕರ ಅಸಭ್ಯ ವರ್ತನೆ ಹಾಗೂ ಗಂಡನಿಗೆ ಜೀವ ಬೆದರಿಕೆ ಇದೆ ಅಂತ ಮಹಿಳೆ ಕುದುರೆಮುಖ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಲಿಲ್ಲ. ಎಫ್ ಐಆರ್ ದಾಖಲಾಗದೆ ಮನೆಗೆ ಹೋಗಲ್ಲ ಅಂತ ಮಹಿಳೆ ಕಳಸ ಪೊಲೀಸ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಕುಳಿತೇ ಬಿಟ್ಟರು.
ಮಗುವಿಗೆ ಇನ್ಸ್ ಪೆಕ್ಟರ್ ಕಚೇರಿಯಲ್ಲೇ ಊಟ ಮಾಡಿಸಿ ಮಲಗಿಸಿದರು.
ಪಕ್ಕದ ಮನೆ ಯುವಕರು ಅಸಭ್ಯ ವರ್ತನೆ ಮಾಡುತ್ತಿದ್ದಾರೆ ಮತ್ತು ಪತಿಗೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು. ಅಸಭ್ಯ ವರ್ತನೆಯ ವಿಡಿಯೋ ನೀಡಿದರೂ ಕುದುರೆಮುಖ ಪೊಲೀಸರು ದೂರು ದಾಖಲಿಸಿಲ್ಲ. ಇದರಿಂದ ಆಕ್ರೋಶಗೊಂಡ ಮಹಿಳೆ ಕಳಸ‌ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಮಧ್ಯರಾತ್ರಿವರೆಗೂ ಕುಳಿತರು.
ಮಹಿಳೆಯ ಆಕ್ರೋಶ ಹಿನ್ನೆಲೆ ಪೊಲೀಸರಿಂದ ಮಧ್ಯರಾತ್ರಿ ಯುವಕರ ವಿರುದ್ಧ ಎಫ್.ಐ.ಆರ್. ದಾಖಲು ಮಾಡಲಾಯಿತು.


ಕುದುರೆಮುಖ ಪೊಲೀಸದ ಠಾಣೆ ವ್ಯಾಪ್ತಿಯ ಸಂಸೆ ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಅಸಭ್ಯ ವರ್ತನೆ ಮಾಡಿದ ನವೀನ್, ಶ್ರೇಯಾಂಶ್ ವಿರುದ್ಧ ದೂರು ದಾಖಲಾಗಿದೆ. ಎರಡು ದಿನದ ಹಿಂದೆ ದೂರು ನೀಡಿದರೂ ಪೊಲೀಸರು ಎಫ್ ಐಆರ್ ದಾಖಲು ಮಾಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು